
ಮೈಸೂರು: ಮುಂದಿನ ಚುನಾವಣೆ ವೇಳೆಗೆ ‘ಹುಚ್ಚ ವೆಂಕಟ್ ಸೇನೆ'ಯ ರಾಜಕೀಯ ಪಕ್ಷ ಎಲ್ಲೆಡೆ ತಲೆ ಎತ್ತಲಿದ್ದು ನನ್ನ ಅನುಯಾಯಿಗಳು ಸ್ಪರ್ಧಿಸಲಿದ್ದಾರೆ. ಭವಿಷ್ಯದಲ್ಲಿ ನಾನು ಪ್ರಧಾನ ಮಂತ್ರಿಯೂ ಆಗಬಹುದು ಎಂದು ನಟ ಹುಚ್ಚ ವೆಂಕಟ್ ಹೇಳಿಕೊಂಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋ ಷ್ಠಿಯಲ್ಲಿ ಸಿನಿಮಾ ಶೈಲಿಯಲ್ಲೇ ಮಾತನಾಡಿದ ಅವರು, ಸಮಾಜಕ್ಕಾಗಿ ಮತ್ತು ದೇಶಕ್ಕಾಗಿ ನಾನು ಜೀವಿಸುತ್ತಿದ್ದೇನೆ. ಸರ್ಕಾರ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರ ಹಿತಾಸಕ್ತಿ ಕಾಯಬೇಕು, 35 ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.
‘ಪೊರ್ಕಿ ಹುಚ್ಚ ವೆಂಕಟ್' ಸಿನಿಮಾ ಏ.28 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಾಯಕ, ನಿರ್ದೇಶಕರೂ ಆಗಿರುವ ವೆಂಕಟ್ ಮಾಹಿತಿ ನೀಡಿದರು. ನನ್ನ ತಾಯಿ ಯಾವಾಗಲೂ ಪೊರ್ಕಿ ಎಂದು ಕರೆಯುತ್ತಿದ್ದರು. ಆದ್ದರಿಂದ ಪೊರ್ಕಿ ಹುಚ್ಚ ವೆಂಕಟ್ ಎಂದು ಚಿತ್ರಕ್ಕೆ ಹೆಸರಿಡಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.