ಈಶ್ವರಪ್ಪ, ಸೋಮಣ್ಣ ಕೈ ತಪ್ಪುತ್ತಾ ವಿಧಾನಸಭಾ ಟಿಕೆಟ್?

Published : Oct 09, 2017, 05:08 PM ISTUpdated : Apr 11, 2018, 12:46 PM IST
ಈಶ್ವರಪ್ಪ, ಸೋಮಣ್ಣ  ಕೈ ತಪ್ಪುತ್ತಾ ವಿಧಾನಸಭಾ ಟಿಕೆಟ್?

ಸಾರಾಂಶ

ಮುಂದಿನ ಚುನಾವಣೆಯಲ್ಲಿ ಪರಿಷತ್ ಸದಸ್ಯರಿಗೆ ಟಿಕೆಟ್ ನೀಡುವುದು ಬೇಡ ಎಂಬ ನಿಯಮ ಜಾರಿಗೆ ಯಡಿಯೂರಪ್ಪ ಚಿಂತಿಸಿದ್ದಾರೆ. ಇದರಿಂದಾಗಿ ಆಕಾಂಕ್ಷಿಗಳಾದ ಕೆ.ಎಸ್. ಈಶ್ವರಪ್ಪ ಮತ್ತು ವಿ.ಸೋಮಣ್ಣ ಅವರಿಗೆ ಟಿಕೆಟ್ ಸಿಗುತ್ತಾ ಎಂಬ ಅನುಮಾನ ಮೂಡಿದೆ.

ಬೆಂಗಳೂರು (ಅ.09): ಮುಂದಿನ ಚುನಾವಣೆಯಲ್ಲಿ ಪರಿಷತ್ ಸದಸ್ಯರಿಗೆ ಟಿಕೆಟ್ ನೀಡುವುದು ಬೇಡ ಎಂಬ ನಿಯಮ ಜಾರಿಗೆ ಯಡಿಯೂರಪ್ಪ ಚಿಂತಿಸಿದ್ದಾರೆ. ಇದರಿಂದಾಗಿ ಆಕಾಂಕ್ಷಿಗಳಾದ ಕೆ.ಎಸ್. ಈಶ್ವರಪ್ಪ ಮತ್ತು ವಿ.ಸೋಮಣ್ಣ ಅವರಿಗೆ ಟಿಕೆಟ್ ಸಿಗುತ್ತಾ ಎಂಬ ಅನುಮಾನ ಮೂಡಿದೆ.

ಹಾಲಿ ಪರಿಷತ್ ಸದಸ್ಯರಾಗಿರುವ ಕೆ. ಎಸ್.ಈಶ್ವ ರಪ್ಪ ಮತ್ತು ವಿ.ಸೋಮಣ್ಣ ಅವರನ್ನು ಗುರಿಯಾಗಿಸಿಕೊಂಡೇ ಇಂಥದ್ದೊಂದು ಗೊಂದಲ ಹುಟ್ಟು  ಹಾಕಲಾಗುತ್ತಿದೆ ಎಂಬ ಮಾತೂ ಕೇಳಿಬಂದಿದೆ.  ರಾಜ್ಯಾಧ್ಯಕ್ಷರಾಗಿರುವ ಯಡಿಯೂರಪ್ಪ ಅವರನ್ನು ಹೊರತುಪಡಿಸಿ ಸಂಸತ್  ಸದಸ್ಯರಿಗೆ  ಟಿಕೆಟ್  ನೀಡುವುದಿಲ್ಲ ಎಂಬ ಸಂದೇಶವನ್ನು ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ರವಾನಿಸಿದ್ದಾರೆ. ತೀರಾ ಅನಿವಾರ್ಯವಾದರೆ  ಜಾತಿ ಲೆಕ್ಕಾಚಾರದ ಆಧಾರದ ಮೇಲೆ  ಬಳ್ಳಾರಿ ಸಂಸದ ಶ್ರೀರಾಮುಲು ಅವರಿಗೆ ಟಿಕೆಟ್ ನೀಡುವ ನಿರೀಕ್ಷೆಯಿದೆ. ಸದ್ಯ ಪರಿಷತ್ತಿನಲ್ಲಿ ಬಿಜೆಪಿಯ ಸುಮಾರು 23 ಸದಸ್ಯರಿದ್ದರೂ ವಿಧಾನಸಭೆ ಚುನಾವಣೆಯತ್ತ ಗಂಭೀರ ಆಸಕ್ತಿ ತೋರಿದವರು ಈಶ್ವರಪ್ಪ ಮತ್ತು ಸೋಮಣ್ಣ ಅವರಿಬ್ಬರೇ. ಈಶ್ವರಪ್ಪ ಮತ್ತು ಸೋಮಣ್ಣ ಅವರಿಬ್ಬರನ್ನೂ ವಿಧಾನಸಭೆ ಪ್ರವೇಶಿಸದಂತೆ ತಡೆಯುವ ಪ್ರಯತ್ನ ನಡೆಯುತ್ತಿರುವಂತೆ ಕಂಡುಬರುತ್ತಿದೆ. ಕಳೆದ ಬಾರಿ ಈಶ್ವರಪ್ಪ ಅವರು ಶಿವಮೊಗ್ಗ ನಗರ ಕ್ಷೇತ್ರದಿಂದ ಮತ್ತು ಸೋಮಣ್ಣ ಗೋವಿಂದರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಬಾರಿಯೂ ಅವರಿಬ್ಬರೂ ಆಯಾ ಕ್ಷೇತ್ರಗಳಿಂದ ಗೆಲ್ಲುವುದಿಲ್ಲ, ಆ ಕ್ಷೇತ್ರಗಳಲ್ಲಿ ಹೊಸ ಮುಖಕ್ಕೆ ಅವಕಾಶ ನೀಡಬೇಕು, ಈಶ್ವರಪ್ಪ ಮತ್ತು ಸೋಮಣ್ಣ ಅವರು ಸೂಚಿಸುವವರಿಗೇ ಟಿಕೆಟ್ ನೀಡಿದರಾಯಿತು ಎಂಬ ವಾದವನ್ನು ಯಡಿಯೂರಪ್ಪ ಆಪ್ತರು ಮಂಡಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ
ಕಾಂಗ್ರೆಸ್ ರ‍್ಯಾಲಿಯಲ್ಲಿ ಹೊಸ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ, ಈ ಭಾರಿಯ ಭರವಸೆ ಏನು?