ಬಡತನದ ಬೇಗೆ : ನೇಗಿಲಿಗೆ ಹೆಗಲು ಕೊಟ್ಟ ರೈತ

Published : Jun 15, 2018, 03:13 PM IST
ಬಡತನದ ಬೇಗೆ : ನೇಗಿಲಿಗೆ ಹೆಗಲು ಕೊಟ್ಟ ರೈತ

ಸಾರಾಂಶ

ಚಿಕ್ಕಮಗಳೂರಿನಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮುಂಗಾರು ಸುರಿಯುತ್ತಿದ್ದು, ರೈತರು ಕೃಷಿ ಕಾರ್ಯಗಳನ್ನು ಆರಂಭ ಮಾಡಿದ್ದಾರೆ. ಇತ್ತ ಒಂದು ಕುಟುಂಬ ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿದ್ದು ಹೊಲವನ್ನು ಉಳಲು ಎತ್ತುಗಳನ್ನು ತರುವ ಶಕ್ತಿಯೂ ಇಲ್ಲದೇ, ಸ್ವತಃ ನೇಗಿಲನ್ನು ಹೆಗಲ ಮೇಲೆ ಹೊತ್ತು ಹೊಲ ಉಳುಮೆ ಮಾಡುತ್ತಿde.

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮುಂಗಾರು ಸುರಿಯುತ್ತಿದ್ದು, ರೈತರು ಕೃಷಿ ಕಾರ್ಯಗಳನ್ನು ಆರಂಭ ಮಾಡಿದ್ದಾರೆ. 

ಇತ್ತ ಒಂದು ಕುಟುಂಬ ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿದ್ದು ಹೊಲವನ್ನು ಉಳಲು ಎತ್ತುಗಳನ್ನು ತರುವ ಶಕ್ತಿಯೂ ಇಲ್ಲದೇ, ಸ್ವತಃ ನೇಗಿಲನ್ನು ಹೆಗಲ ಮೇಲೆ ಹೊತ್ತು ಹೊಲ ಉಳುಮೆ ಮಾಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ನಡೆದಿದೆ.  

ಸ್ವತಃ ಕೊರಳಿಗೆ ಹಗ್ಗ ಕಟ್ಟಿ ನೊಗಕ್ಕೆ ಈ ರೈತ ಹೆಲುಕೊಟ್ಟಿದ್ದಾರೆ. ಎತ್ತುಗಳಿಲ್ಲದ ಕಾರಣ ತಾಯಿ, ಮಗ, ಮೊಮ್ಮಗನೇ ಸ್ವತಃ ನೇಗಿಲು ಹಿಡಿದು ಹೊಲವನ್ನು ಉತ್ತು ಬೇಸಾಯಕ್ಕೆ ಅಣಿಗೊಳಿಸುತ್ತಿದ್ದಾರೆ. ಕಳೆದ ಮೂರು ದಿನದಿಂದ ಇದೇ ರೀತಿ ಬೇಸಾಯದಲ್ಲಿ ಈ ಕುಟುಂಬ ತೊಡಗಿದೆ. 

ಕಳೆದ ಬಾರಿಯೆಲ್ಲಾ ಕಡೂರು ತಾಲೂಕು ಹೆಚ್ಚಿನ ಬರಗಾಲವನ್ನು ಎದುರಿಸಿತ್ತು. ಆದರೆ ಈ ಬಾರಿ ಇಲ್ಲಿ ಉತ್ತಮ ರೀತಿಯಲ್ಲಿ ಮಳೆಯಾಗಿದ್ದು,  ಬೇಸಾಯವನ್ನು ಪ್ರಾರಂಭ ಮಾಡಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ
ಇಂಡಿಗೋ ವಿಮಾನ ರದ್ದತಿ ಕೊಂಚ ಸರಿ ದಾರಿಗೆ