
ಬೆಂಗಳೂರು (ಏ.01): ಇಂದಿನಿಂದ ವಿದ್ಯುತ್ ದರದಲ್ಲಿ ಏರಿಕೆಯಾಗಲಿದೆ ಎಂದು ಕೆಇಆರ್ ಸಿ ಅಧ್ಯಕ್ಷ ಎಂ.ಕೆ ಶಂಕರಲಿಂಗೇಗೌಡ ಹೇಳಿದ್ದಾರೆ.
ಪ್ರತಿ ಯೂನಿಟ್ ಗೆ ಎಷ್ಟು ಏರಿಕೆಯಾಗಲಿದೆ ಎಂಬುದನ್ನು ಇನ್ನೂ ಪ್ರಕಟಿಸಿಲ್ಲ. ಬೆಸ್ಕಾಂ ಹೊರತುಪಡಿಸಿ ಎಲ್ಲಾ ಎಸ್ಕಾಂಗಳಿಂದ ಡಾಟಾ ಸಂಗ್ರಹಿಸಿರುವ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಐದು ದಿನಗಳೊಳಗೆ ದರ ನಿಗದಿ ಪಡಿಸುವುದಾಗಿ ಹೇಳಿದೆ.
ಬರ ಪರಿಸ್ಥಿತಿ ಹಾಗೂ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಪ್ರತಿ ಯೂನಿಟ್ ಗೆ 1.48 ಪೈಸೆ ಬೆಲೆ ಏರಿಸಬೇಕೆಂದು ಎಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.
2012-13 ರಲ್ಲಿ ಎಸ್ಕಾಂ 73 ಪೈಸೆ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು, ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಕೇವಲ 13 ಪೈಸೆ ಮಾತ್ರ ಏರಿಕೆ ಮಾಡಿತ್ತು. 2013-14, ಮತ್ತು 2016-17 ರಲ್ಲಿ 1.02 ಪೈಸೆ ಏರಿಕೆಗೆ ಶಿಫಾರಸು ಮಾಲಾಗಿತ್ತು, ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ 80 ಪೈಸೆ ಏರಿಕೆ ಮಾಡಿತ್ತು ಎಂದು ಅವರು ಹೇಳಿದ್ದಾರೆ.
ಕಳೆದ ಫೆಬ್ರವರಿಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಪ್ರತಿದಿನ 280 ಮೆಗಾ ಯೂನಿಟ್ ವಿದ್ಯುತ್ ಬಳಕೆಯಾಗುತ್ತಿದೆ. ಎಲ್ಲಿಯೂ ಪವರ್ ಕಟ್ ಸಮಸ್ಯೆ ಕೇಳಿ ಬರುತ್ತಿಲ್ಲ ಎಂದು ಕೆಪಿಸಿಎಲ್ ಎಂಡಿ ಕುಮಾರ್ ನಾಯಕ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.