
ಕಾನ್ಪುರ (ಡಿ.03): ನೋಟು ನಿಷೇಧ ಕ್ರಮದಿಂದಾಗಿ ಸರತಿಯಲ್ಲಿ ನಿಂತಿದ್ದಾಗ ಅಥವಾ ಕೆಲಸದ ಒತ್ತಡದಿಂದಾಗಿ ಈವರೆಗೆ 78 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಗರ್ಭಿಣಿಯೋರ್ವರು ಹಣಕ್ಕಾಗಿ ಸರತಿಯಲ್ಲಿ ನಿಂತಿದ್ದಾಗ ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ.
ಸರ್ರೇಶಾ ಎಂಬ ಮೂವತ್ತು ವರ್ಷ ಪ್ರಾಯದ ಮಹಿಳೆಯ ಗಂಡ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಅದರ ಪರಿಹಾರ ಹಣವನ್ನು ಪಡೆಯಲು ಗುರುವಾರದಂದು ಬ್ಯಾಂಕಿಗೆ ಬಂದಿದ್ದಾರೆ. ಆದರೆ ಇಡೀ ದಿನ ನಿಂತರೂ ಹಣ ಸಿಗದೇ ಇದ್ದಾಗ, ಶುಕ್ರವಾರ ಪುನಃ ಬಂದು ಸರತಿಯಲ್ಲಿ ನಿಂತಿದ್ದಾರೆ. ಆದರೆ ಆ ಮಧ್ಯೆಯೇ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಜತೆಗಿದ್ದ ಅತ್ತೆ ಬ್ಯಾಂಕಿನ ಮಹಿಳಾ ಸಿಬ್ಬಂದಿಗಳ ನೆರವಿನಿಂದ ಕೋಣೆಯೊಳಗೆ ಕರೆದೊಯ್ದು ಅಲ್ಲೇ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.