ಕುಮಾರಸ್ವಾಮಿ ವಿರುದ್ಧ ತೊಡೆ ತಟ್ಟಿದ ಪ್ರಜ್ವಲ್ ರೇವಣ್ಣ ? ನಮ್ಮ ಪಕ್ಷದಲ್ಲಿ ರೋಗದ ಜೊತೆ ಸೂಟ್'ಕೇಸ್ ಸಂಸ್ಕೃತಿಯಿದೆ

Published : Jul 06, 2017, 09:19 PM ISTUpdated : Apr 11, 2018, 12:38 PM IST
ಕುಮಾರಸ್ವಾಮಿ ವಿರುದ್ಧ ತೊಡೆ ತಟ್ಟಿದ ಪ್ರಜ್ವಲ್ ರೇವಣ್ಣ ? ನಮ್ಮ ಪಕ್ಷದಲ್ಲಿ ರೋಗದ ಜೊತೆ ಸೂಟ್'ಕೇಸ್ ಸಂಸ್ಕೃತಿಯಿದೆ

ಸಾರಾಂಶ

ದೂರದ ಬೆಟ್ಟ ಕಣ್ಣಿಗೆ ನುಣ್ಣು ಅನ್ನುವ ಹಾಗೆ ಈ ನಾಯಕರ ನಡವಳಿಕೆ'

ಹುಣಸೂರು(ಜು.06): ಬೂದಿ ಕೆಂಡದಂತಿದ್ದ ಜೆಡಿಎಸ್'ನಲ್ಲಿ ಬಿನ್ನಮತ ಬೀದಿಗೆ ಬಂದಿದೆ. ಸ್ವತಃ ಚಿಕ್ಕಪ್ಪನ ವಿರುದ್ಧವೇ ಮಗ ತೊಡೆ ತಟ್ಟಿದ್ದು, ತಮ್ಮ ಪಕ್ಷದ ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.

ಇಂದು ಹುಣಸೂರಿನ ಗೌರಮ್ಮ ಪುಟ್ಟಸ್ವಾಮಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಜೆಡಿಎಸ್ ಜಾಗೃತ ಸಮಾವೇಶದಲ್ಲಿ ಮಾತೃ ಪಕ್ಷದ ತಮ್ಮ ಮನಸ್ಸಿನ ನೋವನ್ನು ಹೊರಹಾಕಿದ ಎಚ್'.ಡಿ. ರೇವಣ್ಣ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ'  ನಮ್ಮ ಪಕ್ಷದಲ್ಲಿ ರೋಗವಿದ್ದು, ನಿಷ್ಠೆಯಿಂದ ಕೆಲಸ ಮಾಡುವವರನ್ನ ಹಿಂಬದಿ ಸೀಟಿನಲ್ಲಿ ಕೂರಿಸುತ್ತೇವೆ. ಸೂಟ್ ಕೇಸ್ ಕೊಟ್ಟವರನ್ನ ಮುಂದೆ ಕೂರಿಸುತ್ತೇವೆ. ಕೆಲವು ನಾಯಕರು ಇದ್ದಾರೆ. ಎರಡು ಪಕ್ಷಗಳಲ್ಲಿ ಕಾಲು ಇಟ್ಟುಕೊಂಡಿದ್ದಾರೆ. ದೂರದ ಬೆಟ್ಟ ಕಣ್ಣಿಗೆ ನುಣ್ಣು ಅನ್ನುವ ಹಾಗೆ ಈ ನಾಯಕರ ನಡವಳಿಕೆ' ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಪ್ರಜ್ವಲ್ ರೇವಣ್ಣ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಆಸೆ ಇರಿಸಿಕೊಂಡಿದ್ದರು. ವಿಶ್ವನಾಥ್ ಎಂಟ್ರಿಯಿಂದ ಲೆಕ್ಕಾಚಾರ ಉಲ್ಟಾಪಲ್ಟಾ ಆದ ಕಾರಣ ಈ ರೀತಿಯ ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದಲ್ಲೇ CPR ನೀಡಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್
ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು: ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ