ಪ್ರಜ್ವಲ್‌ ಕೇಸ್‌ ವಿಚಾರಣೆ ಮುಂದೂಡಿಕೆ

Published : Sep 04, 2019, 09:40 AM IST
ಪ್ರಜ್ವಲ್‌ ಕೇಸ್‌ ವಿಚಾರಣೆ ಮುಂದೂಡಿಕೆ

ಸಾರಾಂಶ

ಪ್ರಜ್ವಲ್ ರೇವಣ್ಣ  ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಮುಂದೂಡಲಾಗಿದೆ.

ಬೆಂಗಳೂರು [ಸೆ.04]:  ಕಳೆದ ಸಂಸತ್‌ ಚುನಾವಣೆಯ ವೇಳೆ ಚುನಾವಣಾಧಿಕಾರಿಗೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಸೆ.6ಕ್ಕೆ ಮುಂದೂಡಿದೆ. ಈ ಕುರಿತಂತೆ ಜಿ. ದೇವರಾಜೇಗೌಡ ಸಲ್ಲಿಸಿದ ಚುನಾವಣಾ ತಕರಾರು ಅರ್ಜಿ ಮಂಗಳವಾರ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿಯ ಈ ಹಿಂದಿನ ವಿಚಾರಣೆ ವೇಳೆ ಪ್ರಜ್ವಲ್‌ ರೇವಣ್ಣ ಅವರಿಗೆ ಕೋರ್ಟ್‌ ಸಿಬ್ಬಂದಿ ಮೂಲಕ ಸಮನ್ಸ್‌ ತಲುಪಿಸುವಂತೆ ಹಾಸನ ಜಿಲ್ಲಾ ನ್ಯಾಯಾಧೀಶರಿಗೆ ಹೈಕೋರ್ಟ್‌ ಹೇಳಿತ್ತು. ಅದರಂತೆ ಮಂಗಳವಾರ ವಿಚಾರಣೆ ವೇಳೆ, ಜಿಲ್ಲಾ ನ್ಯಾಯಾಧೀಶರು ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದರು. ಪ್ರಜ್ವಲ್‌ ರೇವಣ್ಣ ಅವರು ಚುನಾವಣೆ ವೇಳೆ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದ ನಾಮಪತ್ರದಲ್ಲಿ ನಮೂದಿಸಿದ್ದ ವಿಳಾಸಕ್ಕೆ ಕೋರ್ಟ್‌ ಸಿಬ್ಬಂದಿಯಿಂದ ಸಮನ್ಸ್‌ ಕಳಿಸಲಾಗಿತ್ತು. ಆದರೆ, ಅವರು ಆ ವಿಳಾಸದಲ್ಲಿ ಲಭ್ಯವಿಲ್ಲದ ಕಾರಣ ಸಮನ್ಸ್‌ ಜಾರಿ ಸಾಧ್ಯವಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅದಕ್ಕೆ ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ ಸಮನ್ಸ್‌ ಜಾರಿ ಆಗಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಲು ಅರ್ಜಿದಾರರು ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಮನವಿಯ ಬಗ್ಗೆ ಸೆ.6ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?