ಸುವರ್ಣನ್ಯೂಸ್'ನ ವನ್ಯಜೀವಿ ಸಂರಕ್ಷಣೆ ಅಭಿಯಾನದಲ್ಲಿ ಪ್ರಕಾಶ್ ರೈ, ಮಯೂರಿ

Published : May 30, 2017, 06:03 PM ISTUpdated : Apr 11, 2018, 12:44 PM IST
ಸುವರ್ಣನ್ಯೂಸ್'ನ ವನ್ಯಜೀವಿ ಸಂರಕ್ಷಣೆ ಅಭಿಯಾನದಲ್ಲಿ ಪ್ರಕಾಶ್ ರೈ, ಮಯೂರಿ

ಸಾರಾಂಶ

ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ದಿನಪತ್ರಿಕೆ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಸೇವ್ ವೈಲ್ಡ್'ಲೈಫ್ ಅಭಿಯಾನ ಭರದಿಂದ ಸಾಗಿದೆ. ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಕೆ.ಗುಡಿ ಅರಣ್ಯದಲ್ಲಿ  ಚಿತ್ರನಟ ಹಾಗೂ ಅಭಿಯಾನದ ರಾಯಭಾರಿ ಪ್ರಕಾಶ್ ರೈ, ನಟಿ ಮಯೂರಿ ಅರಣ್ಯ ಸಿಬ್ಬಂದಿ ಹಾಗೂ ಸೋಲಿಗರೊಂದಿಗೆ ಪ್ರತ್ಯೇಕ ಸಂವಾದ ನಡೆಸಿದ್ದಾರೆ.

ಚಾಮರಾಜನಗರ(ಮೇ 30): ಕಾಡು ಹಾಗೂ ಕಾಡು ಪ್ರಾಣಿಗಳ ಬಗ್ಗೆ ಕಾಡಂಚಿನ ಜನರಿಗೆ ಹರಿವು ಮೂಡಿಸುವ ಕಾರ್ಯಕ್ರಮವೇ ಸೇವ್ ವೈಲ್ಡ್'ಲೈಫ್ ಅಭಿಯಾನ.  ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ದಿನಪತ್ರಿಕೆ ಜೊತೆಯಾಗಿ ಅರಣ್ಯ ಇಲಾಖೆ ನಡೆಸುತ್ತಿರುವ ಅಭಿಯಾನ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ ಅರಣ್ಯದಲ್ಲಿ ನಡೆಯಿತು.

ಮೊದಲಿಗೆ ಅರಣ್ಯ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದ ನಟ ಪ್ರಕಾಶ್ ರೈ ಕನ್ನೇರಿ ಕಾಲೋನಿಗೆ ತೆರಳಿ  ಸೋಲಿಗರೊಂದಿಗೂ ಸಹ ಚರ್ಚಿಸಿದರು. ನಟಿ ಮಯೂರಿ "ಅರಣ್ಯ ಸಂರಕ್ಷಣೆ" ಅಭಿಯಾನದ ಬಗ್ಗೆ ಸಂತಸ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರು. ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಕಾಳಜಿಗೆ ಅಭಿನಂದನೆ ಸಲ್ಲಿಸಿದರು. ಅರಣ್ಯ ಸಿಬ್ಬಂದಿ ಸಹ ಈ ಅಭಿಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸುವರ್ಣ ನ್ಯೂಸ್ ಹಾಗು ಕನ್ನಡಪ್ರಭದ ಅರಣ್ಯ ಕಾಳಜಿಯನ್ನು ಶ್ಲಾಘಿಸಿದ್ದಾರೆ.

ಇನ್ನು, ಕಾಡಂಚಿನ ಗ್ರಾಮದಲ್ಲಿ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯ್ತಿಗಳನ್ನು ಪತ್ತೆ ಹಚ್ಚಿ ಪ್ರಶಸ್ತಿ ನೀಡುವ ಮೂಲಕ ಮತ್ತಷ್ಟು ಹುರುಪು ತುಂಬುವ ಕೆಲಸ ಸಹ ಮಾಡಲಾಗುತ್ತಿದೆ.  ಚಾಮರಾಜನಗರ  ಜಿಲ್ಲೆ ಕೊಳ್ಳೇಗಾಲ  ತಾಲೂಕಿನ ಹುತ್ತೂರು ಗ್ರಾಮಪಂಚಾಯ್ತಿಯನ್ನು ಅರಣ್ಯಸ್ನೇಹಿ ಗ್ರಾಮಪಂಚಾಯ್ತಿ ಎಂದು ಗುರುತಿಸಲಾಗಿದ್ದು, ನಟ ಪ್ರಕಾಶ್ ರೈ, ನಟಿ ಮಯೂರಿ ಹಾಗೂ ಶಾಸಕ ಆರ್.ನರೇಂದ್ರ ಹುತ್ತೂರು ಗ್ರಾಮಪಂಚಾಯ್ತಿಗೆ ಅರಣ್ಯಸ್ನೇಹಿ ಗ್ರಾಮಪಂಚಾಯ್ತಿ ಎಂದು ಪ್ರಶಸ್ತಿ ಪ್ರಧಾನ ಮಾಡಿದರು.

ಒಟ್ಟಾರೆ, ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಪ್ರತಿವರ್ಷ ಇದೇ ರೀತಿಯ ವಿಶೇಷ ಅಭಿಯಾನಗಳನ್ನು ಮಾಡಿಕೊಂಡು ಬರುತ್ತಿದ್ದು, ಈ ಬಾರಿ ಕಾಡನ್ನು ಉಳಿಸುವ  ಸೇವ್ ವೈಲ್ಡ್'ಲೈಫ್ ಅಭಿಯಾನ ಹಮ್ಮಿಕೊಂಡಿದೆ. ಇದರ ಮೂಲಕವಾದರೂ ಜನರು ಕಾಡಿನ ಮಹತ್ವ ಅರಿತುಕೊಳ್ಳುವಂತಾಗಲಿ ಎಂಬುದೇ ನಮ್ಮ ಆಶಯ.

- ಶಶಿಧರ ಕೆ.ವಿ., ಸುವರ್ಣ ನ್ಯೂಸ್, ಚಾಮರಾಜನಗರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು
ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ