
ಲಖನೌ(09): ಹಜ್ ಭವನಕ್ಕೆ ಬಳಿಯಲಾಗಿದ್ದ ಕೇಸರಿ ಬಣ್ಣದ ವಿಚಾರವನ್ನು ಪ್ರಸ್ತಾಪಿಸಿರುವ ಬಹುಭಾಷಾ ನಟ ಪ್ರಕಾಶ್ ರೈ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪುನಃ ಟೀಕಾಪ್ರಹಾರ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರೈ, ‘ಗೋಡೆಗಳ ಬಣ್ಣ ಬದಲಾವಣೆ ಮಾಡುವುದೇ ವಿಕಾಸವೇ?,’ ಎಂದು ಪ್ರಶ್ನಿಸಿದ್ದಾರೆ.
ಇದರ ಜತೆಗೆ, ‘ರೈತರು ಬೆಲೆ ಕುಸಿತದಿಂದ ಆಲೂಗಡ್ಡೆಯನ್ನು ನಿಮ್ಮ ಮನೆ ಎದುರು ಸುರಿಯುತ್ತಿದ್ದಾರೆ. ಆದಾಗ್ಯೂ ನಿಮ್ಮ ಕೃಷಿ ಸಚಿವ, ರೈತರು ಬೆಳೆದ ಆಲೂಗಡ್ಡೆ ಉತ್ತಮ ಗುಣಮಟ್ಟದಲ್ಲ ಎನ್ನುತ್ತಿದ್ದಾರೆ. ರೈತರ ಕಷ್ಟ ಅರ್ಥೈಸಿಕೊಳ್ಳುವುದು ಹೀಗೆಯೇ?’ ಎಂದು ರೈ ಟೀಕಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.