ಗೋಮೂತ್ರದಿಂದ ವೇದಿಕೆ ಶುದ್ಧಗೊಳಿಸಿದ ಬಿಜೆಪಿ ಕಾರ್ಯಕರ್ತರಿಗೆ ಪ್ರಕಾಶ್ ರೈ ತಿರುಗೇಟು

Published : Jan 16, 2018, 05:28 PM ISTUpdated : Apr 11, 2018, 12:43 PM IST
ಗೋಮೂತ್ರದಿಂದ ವೇದಿಕೆ ಶುದ್ಧಗೊಳಿಸಿದ ಬಿಜೆಪಿ ಕಾರ್ಯಕರ್ತರಿಗೆ ಪ್ರಕಾಶ್ ರೈ ತಿರುಗೇಟು

ಸಾರಾಂಶ

ತಾನು ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಗೋಮೂತ್ರದಿಂದ ಸ್ವಚ್ಛಮಾಡಿರುವ ಘಟನೆಗೆ ನಟ ಪ್ರಕಾಶ್ ರೈ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ತಾನು ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಗೋಮೂತ್ರದಿಂದ ಸ್ವಚ್ಛಮಾಡಿರುವ ಘಟನೆಗೆ ನಟ ಪ್ರಕಾಶ್ ರೈ ತಿರುಗೇಟು ನೀಡಿದ್ದಾರೆ.

#JustAsking ಎಂಬ ಹ್ಯಾಶ್’ಟ್ಯಾಗ್ ಬಳಸಿ, ನಾನು ಎಲ್ಲೇ ಹೋದ್ರೂ ಈ ರೀತಿ ಶುದ್ಧ ಮಾಡ್ತಿರಾ ಎಂದು ಪ್ರಕಾಶ್ ರೈ ಟ್ವೀಟಿಸಿ ಬಿಜೆಪಿ ಕಾರ್ಯಕರ್ತರ ಕಾಲೆಳೆದಿದ್ದಾರೆ.

ಕಳೆದ ಜ. 13ರಂದು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರೈ ಭಾಗವಹಿಸಿದ್ದರು.

ಪ್ರಕಾಶ್ ರೈ ಭಾಗವಹಿಸುವಿಕೆಯಿಂದ ಆ ಸ್ಥಳ ಅಪವಿತ್ರಗೊಂಡಿದೆಯೆಂದು ಹೇಳಿ, ಗೋಮೂತ್ರ ಸಿಂಪಡಿಸಿ ಆ ವೇದಿಕೆಯನ್ನು ಗೋಮೂತ್ರದಿಂದ ಶುದ್ಧಗೊಳಿಸಿದ್ದಾರೆ.

ಪ್ರಕಾಶ್ ರೈ ಸಮಾಜ ಸುಧಾರಕರಲ್ಲ, ಸಮಾಜ ಸುಧಾರಣೆಗೆ ಯಾವುದೇ ಕೊಡುಗೆಯಿಲ್ಲ. ಹಿಂದೂ ಧರ್ಮಕ್ಕೆ ಅವರ ಅವಶ್ಯಕತೆಯಿಲ್ಲ, ಎಂದು ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!