
ಕಾಸರಗೋಡು : ಕಾಸರಗೋಡಿನ ಹೊಸಂಗಡಿಯಲ್ಲಿ ನಟ ಪ್ರಕಾಶ್ ರೈ ಸಮಕಾಲಿನ ವಿಚಾರಗಳು ಎಂಬ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಅವರು ಗೋ ಮಾತೆಗಳೆಲ್ಲಾ ಸೇರಿ ಓಟ್ ಬ್ಯಾಂಕ್ ಆಗಿ, ಓಟ್ ಹಾಕಿದ್ದು, ಈ ಓಟ್’ನಿಂದ ಮಿಸ್ಟರ್ ಯೋಗಿಯವರ ಸ್ಥಿತಿ ಹೇಗಿದೆ ಎಂದು ಗೊತ್ತಾಗಿದೆ ಎಂದು ಉತ್ತರ ಪ್ರದೇಶದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ವ್ಯಂಗ್ಯವಾಡಿದ್ದಾರೆ.
ನಾನಂತೂ ನನ್ನ ವಿರೋಧ ಪಕ್ಷ ಬಿಜೆಪಿ ಎಂದು ಘೋಷಿಸಿದ್ದೇನೆ. ಹೀಗೆಂದ ಮಾತ್ರಕ್ಕೆ ಬಲಪಂಥೀಯ ವಿರೋಧಿ ಎಂದುಕೊಳ್ಳಬೇಡಿ. ನಿಮ್ಮನ್ನು ನಂಬಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿಯನ್ನು ಬರಲು ಬಿಡಬೇಡಿ.
ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷದ ವಿಚಾರದಲ್ಲಿಯೂ ಕೂಡ ನಿಮ್ಮ ಮತವನ್ನು ಮಾರಿಕೊಳ್ಳಬೇಡಿ. ಕೋಮುವಾದಿಗಳೊಂದಿಗೆ ಮೈತ್ರಿ ಮಾಡಿಕೊಂಡು ನಿಮ್ಮ ಮತ ಮಾರಾಟಕ್ಕೆ ಇಡಬೇಕು. ಕೋಮುವಾದಿಗಳನ್ನು ಬೇರು ಸಹಿತವಾಗಿ ಕಿತ್ತು ಒದ್ದೋಡಿಸುವ ಕೆಲಸ ಮಾಡಿ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.