ಸರ್ಕಾರಿ ಶಾಲೆ ದತ್ತು ತೆಗೆದುಕೊಂಡ ಪ್ರಕಾಶ್ ರಾಜ್

Published : Jun 12, 2018, 09:06 PM IST
ಸರ್ಕಾರಿ ಶಾಲೆ ದತ್ತು ತೆಗೆದುಕೊಂಡ ಪ್ರಕಾಶ್ ರಾಜ್

ಸಾರಾಂಶ

ಸರ್ಕಾರಿ ಶಾಲೆ ದತ್ತು ಪಡೆದ ನಟ ಪ್ರಕಾಶ್ ರಾಜ್ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಭಾರತೀನಗರ ಶಾಲೆಯ ಸರ್ವತೋಮುಖ ಅಭಿವೃದ್ದಿಗೆ ಸಿದ್ದ ಎಂದ ನಟ  

ಮಂಡ್ಯ[ಜೂ.12]: ನಟ ಪ್ರಕಾಶ್ ರಾಜ್ ಇಂದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಭಾರತೀನಗರ ಸಮೀಪದ ಮೆಣಸಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕರಿಸಿದ್ದಾರೆ. 

ನಂತರ ಮಾತನಾಡಿದ ಪ್ರಕಾಶ್ ರಾಜ್, ಭಯ ಉಪಯೋಗಿಸಿ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಲಾಗುತ್ತಿದೆ. ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳೂ ಇದರಲ್ಲಿ ಭಾಗಿಯಾಗಿವೆ ಎಂದು ಹರಿಹಾಯ್ದರು. ಶೇ.70ರಷ್ಟು ಗ್ರಾಮೀಣ ಪ್ರದೇಶಗಳಿರುವ ನಮ್ಮ ದೇಶದಲ್ಲಿ ಅಂಜಿಕೆಯಿಲ್ಲದೆ ಓದಬೇಕೆಂದರೆ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಬೇಕು ಎಂದು ಅಭಿಪ್ರಾಯಪಟ್ಟರು.

ಶಾಲೆಗೆ ಶಿಕ್ಷಣ ಇಲಾಖೆ ನೀಡುವ ಶಿಕ್ಷಕರಿಗಿಂತಲೂ ಹೆಚ್ಚಿನ ಶಿಕ್ಷಕರ ಅಗತ್ಯವಿದ್ದಲ್ಲಿ ಅಂತಹ ಸಂದರ್ಭದಲ್ಲಿ ಶಿಕ್ಷಕರನ್ನು ನೇಮಿಸಲು ತಾವು ಸಹಾಯ ಮಾಡುವುದಾಗಿ ಪ್ರಕಾಶ್ ಭರವಸೆ ನೀಡಿದರು. ಎಲ್ಲರೊಂದಿಗೆ ಚರ್ಚೆ ನಡೆಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ತಮ್ಮ ತಂಡ ಸಿದ್ಧವಿರುವುದಾಗಿ ಅವರು ಸ್ಪಷ್ಟಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾ ಚೆನ್ನಾಗಿಲ್ಲ, ನಾ ಬಿಳಿ ಇಲ್ಲ, ನನ್ನ ಕುರೂಪಿ ಅಂತಾರೆ: ಪುಟ್ಟ ಮಗಳ ಅಳು ಕೇಳಲಾಗದೇ ನೆಟ್ಟಿಗರ ಸಲಹೆ ಕೇಳಿದ ತಾಯಿ
ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಬಂಗಾರಕ್ಕೆ ಕನ್ನ! 85 ಗುಂಡು ಕೊಟ್ಟರೆ 77 ಮಾತ್ರ ವಾಪಸ್