ಹೈಕಮಾಂಡ್ ಬಯಸಿದರೆ ಸಿಎಂ ಆಗಲು ಸಿದ್ಧ : ಪರಮೇಶ್ವರ್

Published : Feb 03, 2018, 07:42 AM ISTUpdated : Apr 11, 2018, 12:45 PM IST
ಹೈಕಮಾಂಡ್ ಬಯಸಿದರೆ ಸಿಎಂ ಆಗಲು ಸಿದ್ಧ : ಪರಮೇಶ್ವರ್

ಸಾರಾಂಶ

‘ಪಕ್ಷದಲ್ಲಿ ಯಾರು ಬೇಕಾದರೂ ಮುಖ್ಯ ಮಂತ್ರಿ ಆಕಾಂಕ್ಷಿ ಎನ್ನಬಹುದು. ಕಾಂಗ್ರೆಸ್ ವರಿಷ್ಠರು ಹಾಗೂ ಶಾಸಕರು ಪರಮೇಶ್ವರ ಸಿಎಂ ಆಗಲಿ ಅಂದರೆ ನಾನು ಮುಖ್ಯಮಂತ್ರಿ ಯಾಗಲು ಸಿದ್ಧ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ|ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಳಗಾವಿ: ‘ಪಕ್ಷದಲ್ಲಿ ಯಾರು ಬೇಕಾದರೂ ಮುಖ್ಯ ಮಂತ್ರಿ ಆಕಾಂಕ್ಷಿ ಎನ್ನಬಹುದು. ಕಾಂಗ್ರೆಸ್ ವರಿಷ್ಠರು ಹಾಗೂ ಶಾಸಕರು ಪರಮೇಶ್ವರ ಸಿಎಂ ಆಗಲಿ ಅಂದರೆ ನಾನು ಮುಖ್ಯಮಂತ್ರಿ ಯಾಗಲು ಸಿದ್ಧ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ|ಜಿ. ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನೆಂದಿಗೂ ರಾಜಕೀಯ ಸನ್ಯಾಸಿ ಎಂದು ಹೇಳಿಕೆ ನೀಡಿಲ್ಲ.ನಾವು ಯಾರು ಬೇಕಾದವರೂ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡು ತಿರುಗಾಡಬಹುದು. ಆದರೆ, ಮುಂದಿನ ಸಿಎಂ ಯಾರು ಎಂಬುದು ಶಾಸಕಾಂಗ ಸಭೆಯಲ್ಲೇ ತೀರ್ಮಾನವಾಗುತ್ತದೆ’ ಎಂದರು.

 ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷನಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಮುಂದಿರುವ ಗುರಿ ಎಂದಿರುವ ಪರಮೇಶ್ವರ್, ಪಕ್ಷಕ್ಕೆ ಯಾರಾದರೂ ಯಜಮಾನರು ಬೇಕು. ನಮ್ಮ ಯಜಮಾನರು ಹೈಕಮಾಂಡ್. ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು