
ಉಡುಪಿ(ಅ.15): ಶ್ರೀ ಕೃಷ್ಣ, ಶ್ರೀ ರಾಮ ಇಬ್ಬರೂ ಮಾಂಸಹಾರಿಗಳು.. ಈಗಂತಾ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಮಣಿಪಾಲದ ಡಿಸಿ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆ ವೇಳೆ ಮಾತನಾಡಿದ ಅವರು, ಶ್ರೀ ಕೃಷ್ಣ, ಶ್ರೀ ರಾಮ ಇಬ್ಬರೂ ಮಾಂಸಾಹಾರಿಗಳೇ.. ಈ ಮಾತನ್ನು ನಾನು ಉದ್ದೇಶಪೂರ್ವಕವಾಗಿಯೇ ಹೇಳುತ್ತಿದ್ದೇನೆ.. ದೇಶಾದ್ಯಂತ ಆಹಾರ ಪದ್ಧತಿ ಬಗ್ಗೆ ಚರ್ಚೆ ಆಗುತ್ತಿದೆ. ಸಾಕಷ್ಟು ಮಂದಿ ವಿದ್ವಾಂಸರಿದ್ದಾರೆ, ಈ ಬಗ್ಗೆ ಚರ್ಚೆ ಆಗಲಿ ಎಂದು ಅವರು ಹೇಳಿದರು. ಇನ್ನೂ ಇದೇ ವ್ಯಾಸರಾಯರು ಮದುವೆ ಆಗದ ಮೀನುಗಾರ ಮಹಿಳೆಯ ಪುತ್ರ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.