ಆರ್‌ಎಸ್‌ಎಸ್ ಕಾರ್ಯಕ್ರಮಕ್ಕಾಗಿ ನಾಗ್ಪುರಕ್ಕೆ ಬಂದಿಳಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

Published : Jun 06, 2018, 05:33 PM ISTUpdated : Jun 06, 2018, 05:35 PM IST
ಆರ್‌ಎಸ್‌ಎಸ್ ಕಾರ್ಯಕ್ರಮಕ್ಕಾಗಿ ನಾಗ್ಪುರಕ್ಕೆ ಬಂದಿಳಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಸಾರಾಂಶ

ವಿರೋಧದ ನಡುವೆಯೂ ಮಾಜಿ ರಾಷ್ಟ್ರಪತಿ ಪ್ರಣಬ್  ಮುಖರ್ಜಿ,ನಾಳೆ ನಡೆಯಲಿರುವ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಣಬ್ ಭಾಷಣ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ನಾಗ್ಪುರ(ಜೂನ್.6) ಹಲವು ಕಾಂಗ್ರೆಸ್ಸಿಗರ ತೀವ್ರ ವಿರೋಧದ ನಡುವೆಯೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರಕ್ಕೆ ಬಂದಿಳಿದ್ದಾರೆ. 

ಆರ್‌ಎಸ್‌ಎಸ್ ಕೇಂದ್ರ ಕಛೇರಿ ನಾಗ್ಪುರದಲ್ಲಿ ನಾಳೆ(ಜೂನ್.7) ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಪಾಲ್ಗೊಳ್ಳಲಿದ್ದಾರೆ.  ಇದೇ ಮೊದಲ ಬಾರಿಗೆ ಪ್ರಣಬ್  ಮುಖರ್ಜಿ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆರ್‌ಎಸ್‌ಎಸ್ ಆಹ್ವಾನ ಒಪ್ಪಿಕೊಂಡ ಪ್ರಣಬ್ ಮುಖರ್ಜಿ ನಿರ್ದಾರಕ್ಕೆ ಕಾಂಗ್ರೆಸ್ಸಿಗರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

 

 

ಅದೆಷ್ಟೇ ವಿರೋಧ ವ್ಯಕ್ತವಾದರೂ, ಪ್ರಣಬ್ ಮುಖರ್ಜಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಇಷ್ಟೇ ಅಲ್ಲ ಎಲ್ಲದಕ್ಕೂ ನಾಗ್ಪುರದಲ್ಲಿ ಉತ್ತರ ನೀಡಲಿದ್ದೇನೆ ಎಂದಿದ್ದರು. ಹಿಂದುತ್ವ ಸಂಘಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಮಾಜಿ ರಾಷ್ಟ್ರಪತಿ ಮುಖರ್ಜಿ ಭಾಷಣದ ಮೇಲೆ ಇದೀಗ ಎಲ್ಲರ ಚಿತ್ತ ನೆಟ್ಟಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ