
ನವದೆಹಲಿ: 2019ರ ಲೋಕಸಭಾ ಚುನಾವಣೆಗಾಗಿ ಬಿಜೆಪಿಯ ತಂತ್ರಗಾರಿಕೆ ರೂಪಿಸುವ ಹೊಣೆಯನ್ನು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ವಹಿಸಿಕೊಳ್ಳಲಿದ್ದಾರೆ ಎಂಬ ವರದಿಗಳನ್ನು ಅವರ ತಂಡದ ನಾಯಕರೊಬ್ಬರು ಅಲ್ಲಗಳೆದಿದ್ದಾರೆ.
ಈ ಕುರಿತು ಮಾಧ್ಯವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆ್ಯಕ್ಷನ್ ಕಮಿಟಿ (ಐ- ಪ್ಯಾಕ್)ನ ಸದಸ್ಯರೊಬ್ಬರು, ‘ರಾಜಕೀಯ ನಾಯಕರೊಂದಿಗೆ ಪ್ರಶಾಂತ್ ಕಿಶೋರ್ ಭೇಟಿ ಹೊಸದೇನಲ್ಲ. ಇದಕ್ಕೆ ಕೆಲ ಬಿಜೆಪಿ ನಾಯಕರೊಂದಿಗಿನ ಭೇಟಿಯೂ ಹೊಸದಲ್ಲ. 2019ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯನ್ನು ಕಿಶೋರ್ ಸೇರುವ ಯಾವುದೇ ಸಾಧ್ಯತೆ ಇಲ್ಲ’ ಎಂದು ಹೇಳಿದ್ದಾರೆ.
2014ರ ಲೋಕಸಭಾ ಚುನಾವಣೆ ವೇಳೆ ಪ್ರಶಾಂತ್ ಅವರ ತಂಡವೇ ಬಿಜೆಪಿ ಪರವಾಗಿ ತಂತ್ರಗಾರಿಕೆ ರೂಪಿಸಿತ್ತು. ನಂತರದ ದಿನಗಳಲ್ಲಿ ಅವರು ಬಿಜೆಪಿ ಪಾಳಯದಿಂದ ದೂರವಾಗಿ ಕಾಂಗ್ರೆಸ್, ಜೆಡಿಯು, ವೈಎಸ್ಆರ್ ಕಾಂಗ್ರೆಸ್ ಪರವಾಗಿ ಕಾರ್ಯನಿರ್ವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.