ದೀದೀ ನೆರವಿಗೆ ಬಂದ ಚುನಾವಣಾ ತಂತ್ರಗಾರ: ಟಿಎಂಸಿ ಗೆಲುವಿಗೆ ಬಿಗ್ ಪ್ಲ್ಯಾನ್ ರೆಡಿ!

Published : Jul 11, 2019, 08:44 AM ISTUpdated : Jul 11, 2019, 08:45 AM IST
ದೀದೀ ನೆರವಿಗೆ ಬಂದ ಚುನಾವಣಾ ತಂತ್ರಗಾರ: ಟಿಎಂಸಿ ಗೆಲುವಿಗೆ ಬಿಗ್ ಪ್ಲ್ಯಾನ್ ರೆಡಿ!

ಸಾರಾಂಶ

ಮಮತಾ ಬ್ಯಾನರ್ಜಿ ನೆರವಿಗೆ ಬಂದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್| ದೀದಿ ಗೆಲುವಿಗೆ ಸಿದ್ಧವಾಯ್ತು ಈ ಬಿಗ್ ಪ್ಲ್ಯಾನ್

ಕೋಲ್ಕತಾ[ಜು.11]: 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆಲ್ಲಿಸುವ ಹೊಣೆ ಹೊತ್ತಿರುವ ಚುನಾವಣಾ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌, ಇದೀಗ ರಾಜ್ಯದ 5 ಲಕ್ಷ ಯುವಕರನ್ನು ರಾಜಕೀಯಕ್ಕೆ ಕರೆತರುವ ಹೊಸ ಯೋಜನೆಯೊಂದನ್ನು ರೂಪಿಸಿದ್ದಾರೆ.

ರಾಜಕೀಯದಲ್ಲಿ ಯುವಕರು’ ಎಂಬ ಈ ಯೋಜನೆಯಡಿ ಪ್ರತಿ ದಿನ 5000 ಯುವಕರನ್ನು ಪಕ್ಷಕ್ಕೆ ಸೇರಿಸುವ ಗುರಿ ಹಾಕಿಕೊಳ್ಳಲಾಗಿದೆ. ಮುಂದಿನ ಸೆಪ್ಟೆಂಬರ್‌ ವೇಳೆ ಈ ಸದಸ್ಯತ್ವ ನೋಂದಣಿ ಮೂಲಕ ಒಟ್ಟು 5 ಲಕ್ಷ ಯುವಕರನ್ನು ಪಕ್ಷಕ್ಕೆ ಸೇರಿಸಿಕೊಳಲು ಉದ್ದೇಶಿಸಲಾಗಿದೆ. ಬಳಿಕ ಈ ಎಲ್ಲಾ 5 ಲಕ್ಷ ಯುವಕರಿಗೆ ಚುನಾವಣೆ ಗೆಲ್ಲುವ ರಣತಂತ್ರದ ಕುರಿತು ಮುಂದಿನ 15 ತಿಂಗಳ ಅವಧಿಯಲ್ಲಿ ತರಬೇತಿ ನೀಡಲಾಗುವುದು. ತರಬೇತಿ ಬಳಿಕ ಈ ಯುವಕರು ತಾವು ಬಯಸಿದ ಯಾವುದೇ ರಾಜಕೀಯ ಪಕ್ಷವನ್ನು ಸೇರಿಕೊಳ್ಳಬಹುದಾಗಿದೆ.

ಮೋದಿಗೆ ಹೆದರಿದ ದೀದಿ: ಬಂಗಾಳ ಉಳಿಸಿಕೊಳ್ಳಲು ಚುನಾವಣಾ ತಂತ್ರಗಾರನ ಮೊರೆ!

ಈ ನೇಮಕಾತಿ ನೇರವಾಗಿ ಟಿಎಂಸಿಗೆ ಸೇರಿದ್ದು ಎಂದು ಪ್ರಶಾಂತ್‌ ಕಿಶೋರ್‌ ಹೇಳಿಲ್ಲವಾದರೂ, ಈ ಯುವ ಪಡೆ ಮುಂದಿನ ದಿನಗಳಲ್ಲಿ ಟಿಎಂಸಿಗೆ ಹೊಸ ಶಕ್ತಿಯಾಗಿ ಸೇರ್ಪಡೆಯಾಗಲಿದೆ ಎಂಬ ವಿಶ್ವಾಸವಿದೆ.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 42 ಸ್ಥಾನಗಳ ಪೈಕಿ ಬಿಜೆಪಿ 18 ಸ್ಥಾನ ಗೆಲ್ಲುವ ಮೂಲಕ ಟಿಎಂಸಿಗೆ ಆಘಾತ ನೀಡಿತ್ತು. ಹೀಗಾಗಿ ಟಿಎಂಸಿ, ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಶಾಂತ್‌ ಕಿಶೋರ್‌ ಅವರ ತಂಡದ ನೆರವು ಪಡೆಯಲು ನಿರ್ಧರಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ