ಕೋರ್ಟ್ ಹಾಲ್'ನಿಂದ ಕೂಗುತ್ತಾ ಹೊರಬಂದ ಪ್ರಶಾಂತ್ ಭೂಷಣ್; ಕಾರಣವೇನು ಗೊತ್ತಾ?

Published : Nov 10, 2017, 08:04 PM ISTUpdated : Apr 11, 2018, 12:49 PM IST
ಕೋರ್ಟ್ ಹಾಲ್'ನಿಂದ ಕೂಗುತ್ತಾ ಹೊರಬಂದ ಪ್ರಶಾಂತ್ ಭೂಷಣ್; ಕಾರಣವೇನು ಗೊತ್ತಾ?

ಸಾರಾಂಶ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಗರಂ ಆಗಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪ ಮಾಡುತ್ತಾ, ಕೋರ್ಟ್ ಹಾಲ್’ನಿಂದ ಕೂಗಾಡುತ್ತಾ ಹೊರ ಬಂದಿದ್ದಾರೆ.

ನವದೆಹಲಿ (ನ.10): ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಗರಂ ಆಗಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪ ಮಾಡುತ್ತಾ, ಕೋರ್ಟ್ ಹಾಲ್’ನಿಂದ ಕೂಗಾಡುತ್ತಾ ಹೊರ ಬಂದಿದ್ದಾರೆ.

ಖಾಸಗಿ ವೈದ್ಯಕೀಯ ಕಾಲೇಜುಗಳ ಸೀಟು ಹಂಚಿಕೆ ಹಗರಣದಲ್ಲಿ ನಿಮ್ಮ ಪಾತ್ರವಿದೆ ಎಂದು ಪ್ರಶಾಂತ್ ಭೂಷಣ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪ ಮಾಡಿದ್ದಾರೆ.  ತನಿಖೆಯನ್ನು ಎಸ್ಐಟಿಗೆ ವಹಿಸಲು ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪ್ರಕರಣವನ್ನು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದಾರೆ.  ಪ್ರಕರಣ ವರ್ಗಾಯಿಸಿರುವ ಮುಖ್ಯ ನ್ಯಾ. ಮಿಶ್ರಾ ನಡೆಗೆ ಪ್ರಶಾಂತ್ ಭೂಷಣ್ ಬೇಸರ ವ್ಯಕ್ತಪಡಿಸಿದ್ದಾರೆ. ಕೋರ್ಟ್ ಹಾಲ್’ನಿಂದ ಕೂಗಾಡುತ್ತಾ ಹೊರ ಬಂದಿದ್ದಾರೆ.

ಹಗರಣದಲ್ಲಿ ಕೆಲವು ನ್ಯಾಯಮೂರ್ತಿಗಳೂ ಭಾಗಿ ಶಂಕೆಯಿದೆ. ವಿಶ್ವಾಸಾರ್ಹ ತನಿಖೆ ನಡೆಸಬೇಕು. ಆಗ ಮಾತ್ರವೇ ನ್ಯಾಯಾಂಗದ ಮೇಲೆ ನಂಬಿಕೆ ಉಳಿಯಲು ಸಾಧ್ಯ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಹಳದಿ ಮಾರ್ಗದ ಮೆಟ್ರೋ ನಿಲ್ದಾಣಗಳ ಬಳಿ, 6 ಹೊಸ ಬಿಎಂಟಿಸಿ ಬಸ್ ತಂಗುದಾಣಗಳ ಸ್ಥಾಪನೆ!
ಅಂಬಾನಿ ಅಳಿಯನಿಗೆ ಯಾಕೆ ಬಂತು ಇಂಥಾ ಸ್ಥಿತಿ, ಶ್ರೀರಾಮ್‌ ಲೈಫ್‌ ಇನ್ಶುರೆನ್ಸ್‌ ಪಾಲು ಮಾರಾಟಕ್ಕೆ ನಿರ್ಧಾರ!