ಕಾರ್ಯಕರ್ತನಿಗೆ ’ನಾನೇ ನಿಮ್ಮ ಕಾಲಿಗೆ ನಮಸ್ಕಾರ ಮಾಡ್ತೀನಿ’ ಅಂದ್ರು ಅನಂತ್

Published : Jun 26, 2018, 10:36 AM IST
ಕಾರ್ಯಕರ್ತನಿಗೆ ’ನಾನೇ ನಿಮ್ಮ ಕಾಲಿಗೆ ನಮಸ್ಕಾರ ಮಾಡ್ತೀನಿ’  ಅಂದ್ರು ಅನಂತ್

ಸಾರಾಂಶ

ಕಾಲು ಮುಟ್ಟಲು ಬಂದ ಕಾರ್ಯಕರ್ತನನ್ನು ತಡೆದ ಕೇಂದ್ರ ಸಚಿವ ಅನಂತ್ ಕುಮಾರ್  ಇದೇ ಸಂದರ್ಭದಲ್ಲಿ ತಮ್ಮ ತಂದೆಯನ್ನು ನೆನಪಿಸಿಕೊಂಡ ಸಚಿವರು 

ಶಾಸ್ತ್ರಿ ಭವನದ ತನ್ನ ಕಚೇರಿಗೆ ಕೆಲಸದ ನಿಮಿತ್ತ ಬರುವ ಬಿಜೆಪಿ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಕಾಲು ಮುಟ್ಟಿ ನಮಸ್ಕಾರ ಮಾಡುವುದು ಬೇಡ, ಇದು ನನಗೆ ಇಷ್ಟ ಆಗೋದಿಲ್ಲ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಪದೇಪದೇ ಬಂದವರಿಗೆಲ್ಲ ಹೇಳುತ್ತಲೇ ಇರುತ್ತಾರಂತೆ.

ಕಳೆದ ವಾರ ತನ್ನನ್ನು ಭೇಟಿಯಾಗಲು ಬಂದಿದ್ದ ಟ್ರೇಡ್ ಯೂನಿಯನ್ ನಿಯೋಗದ ಒಬ್ಬ ಬೆಂಗಳೂರಿನ ಮುಖಂಡ ಕಾಲು ಮುಟ್ಟಿ ನಮಸ್ಕಾರ ಮಾಡಲು ಬಂದಾಗ ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಅನಂತ್, ‘ಕಾಲು ಮುಟ್ಟುವುದಿದ್ದರೆ ದೇವರಿಗೆ, ತಂದೆ ತಾಯಿಗೆ ಮುಟ್ಟಿ ನಮಸ್ಕಾರ ಮಾಡಿ. ಅದು ಬಿಟ್ಟು ಜನಪ್ರತಿನಿಧಿಗಳಿಗೆ ಹೀಗೆ ಮಾಡುವುದು ನನಗಿಷ್ಟವಿಲ್ಲ. ಇನ್ನೊಮ್ಮೆ ಹೀಗೆ ಮಾಡಿದರೆ ನಾನು ನಿಮಗೆ ನಮಸ್ಕಾರ ಮಾಡಬೇಕಾಗುತ್ತದೆ’ ಎಂದು ಹೇಳಿದರು.

ಅನಂತ ಕುಮಾರ್ ತಂದೆ ನಾರಾಯಣ ಶಾಸ್ತ್ರಿಗಳು ಕೂಡ ಹುಬ್ಬಳ್ಳಿಯಲ್ಲಿ ರೈಲ್ವೆ ಟ್ರೇಡ್ ಯೂನಿಯನ್‌ನಲ್ಲಿ ಇದ್ದರಂತೆ. ಮಗ ಕೇಂದ್ರ ಮಂತ್ರಿಯಾದ ಮೇಲೆ ದೆಹಲಿಗೆ ಬಂದಿದ್ದ ನಾರಾಯಣ ಶಾಸ್ತ್ರಿಗಳು ಒಮ್ಮೆ ನಮ್ಮ ರೈಲ್ವೆ ಮುಖಂಡ ಜಾರ್ಜ್ ಫರ್ನಾಂಡಿಸ್‌ರನ್ನು ಭೇಟಿ ಮಾಡಿಸು ಎಂದು ಹೇಳಿದರಂತೆ. ಸಂಪುಟ ಸಭೆಯಲ್ಲಿ ಸಿಕ್ಕಾಗ ಜಾರ್ಜ್ ಬಳಿ ಅನಂತ್ ತಂದೆಯ ಬಯಕೆ ಹೇಳಿಕೊಂಡರು. ಮರುದಿನ ಬೆಳಿಗ್ಗೆ ಜಾರ್ಜ್ ತಾನೇ ಬಂದು ಶಾಸ್ತ್ರಿಗಳನ್ನು ಭೇಟಿಯಾಗಿ ಹೋದರಂತೆ. 

(ಪ್ರಶಾಂತ್ ನಾತು ಅವರ ಅಂಕಣದ ಆಯ್ದ ಭಾಗ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ