
ಮೋದಿ ಆಪ್ತ ಪತ್ರಕರ್ತ ಅರಕಲಗೂಡು ಸೂರ್ಯಪ್ರಕಾಶ್ ಪ್ರಸಾರ ಭಾರತಿ ಮುಖ್ಯಸ್ಥರಾಗಿ ಮೂರು ವರ್ಷದ ಅವಧಿ ಮುಕ್ತಾಯವಾಗಿದ್ದು, ಇನ್ನೂವರೆಗೂ ಅವರನ್ನು ಮುಂದುವರೆಸುವ ಬಗ್ಗೆ ಸರ್ಕಾರದ ಕಡೆಯಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ. ಪ್ರಸಾರ ಭಾರತಿ ಮುಖ್ಯಸ್ಥ ಎಂದರೆ ತಿಂಗಳಿಗೊಮ್ಮೆ ಮೀಟಿಂಗ್ ಅಟೆಂಡ್ ಮಾಡಿ ಸಂಬಳ-ಸಾರಿಗೆ ತೆಗೆದುಕೊಂಡು ಹೋಗುವ ಪದ್ಧತಿ ಇದ್ದಾಗ ಕಳೆದ ಮೂರು ವರ್ಷಗಳಲ್ಲಿ ಒಳಗೆ ಹೋರಾಟ ಮಾಡಿ ಕಾನೂನಿನಲ್ಲಿ ಇರುವ
ಸ್ವಾಯತ್ತೆಯನ್ನು ನಿಜವಾಗಿ ಪಡೆದುಕೊಳ್ಳುವ ಪ್ರಯತ್ನ ಮಾಡಿದ್ದೇ ಸೂರ್ಯಪ್ರಕಾಶರಿಗೆ ಮುಳುವಾದಂತೆ ಕಾಣುತ್ತಿದೆ. ಅಂದ ಹಾಗೆ ಜೀವನವಿಡೀ ಪತ್ರಕರ್ತರಾಗಿ ಕೆಲಸ ಮಾಡಿರುವ ಸೂರ್ಯಪ್ರಕಾಶರಿಗೆ ಕಳೆದ ಮೂರು ವರ್ಷಗಳಲ್ಲಿ ಅಧಿಕಾರಶಾಹಿ ಕೆಲಸ ಮಾಡುವ ವಿಧಾನ ನೋಡಿ ದೇಶದ ಸಮಸ್ಯೆಗೆ ರಾಜಕಾರಣಿಗಿಂತ ಅಧಿಕಾರಿಗಳೇ ಹೆಚ್ಚು ಕಾರಣ ಎಂದು ಮನವರಿಕೆ ಆಗಿದೆಯಂತೆ.
(ಪ್ರಶಾಂತ್ ನಾತೂ ಅವರ ಇಂಡಿಯಾ ಗೇಟ್ ಅಂಕಣದ ಆಯ್ದ ಭಾಗ, ಕನ್ನಡಪ್ರಭ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.