ಪ್ರತಾಪ್ ಸಿಂಹ ಬೆಂಬಲಿಗರಿಂದ ನಾಡಿನ ವೀರ ವನಿತೆಯರಿಗೆ ಅವಮಾನ

Published : Nov 29, 2017, 09:10 PM ISTUpdated : Apr 11, 2018, 12:59 PM IST
ಪ್ರತಾಪ್ ಸಿಂಹ ಬೆಂಬಲಿಗರಿಂದ ನಾಡಿನ ವೀರ ವನಿತೆಯರಿಗೆ ಅವಮಾನ

ಸಾರಾಂಶ

ಬಾಲಿವುಡ್ ಭಾರಿ ಬಜೆಟ್ ಚಿತ್ರ ‘ಪದ್ಮಾವತಿ’ ವಿರೋಧಿಸುವ ಭರದಲ್ಲಿ ಬಿಜೆಪಿ ಮಹಾ ಎಡವಟ್ಟು ಮಾಡಿಕೊಂಡಿದೆ. ಸಂಸದ ಪ್ರತಾಪ ಸಿಂಹ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವ  ಕುರಿತ ವಿವಾದಾತ್ಮಕ ಪೋಸ್ಟ್'ನಿಂದಾಗಿ ಕಾಂಗ್ರೆಸ್, ಬಿಜೆಪಿ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬೆಂಗಳೂರು (ನ.29): ಬಾಲಿವುಡ್ ಭಾರಿ ಬಜೆಟ್ ಚಿತ್ರ ‘ಪದ್ಮಾವತಿ’ ವಿರೋಧಿಸುವ ಭರದಲ್ಲಿ ಬಿಜೆಪಿ ಮಹಾ ಎಡವಟ್ಟು ಮಾಡಿಕೊಂಡಿದೆ. ಸಂಸದ ಪ್ರತಾಪ ಸಿಂಹ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವ  ಕುರಿತ ವಿವಾದಾತ್ಮಕ ಪೋಸ್ಟ್'ನಿಂದಾಗಿ ಕಾಂಗ್ರೆಸ್, ಬಿಜೆಪಿ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬಾಲಿವುಡ್ ಪದ್ಮಾವತಿ  ಚಿತ್ರಕ್ಕೆ ದೇಶದಲ್ಲಿ ಪರ ವಿರೋಧ ಕೇಳಿ ಬಂದಿದೆ. ಹಾಗೇನೆ ಸ್ಯಾಂಡಲ್'ವುಡ್ ಕೂಡ  ಚಿತ್ರದ ಪರ ಧ್ವನಿ ಎತ್ತಿದೆ. ಇದನ್ನ ಖಂಡಿಸುವ ಭರದಲ್ಲಿ ಸಂಸದ ಪ್ರತಾಪ ಸಿಂಹ ಬೆಂಬಲಿಗರು ಕೀಳು ಪದಗಳಿಂದ ನಿಂದಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಹಾಕಿ ನಾಡಿನ ವೀರ ವನಿತೆಯರನ್ನು ಅವಮಾನಿಸಿದ್ದಾರೆ. ಪ್ರತಾಪ್ ಸಿಂಹ ಬೆಂಬಲಿಗರ ಈ ಪೋಸ್ಟ್ ಗಳಿಗೆ ಕಾಂಗ್ರೆಸ್ ಕಿಡಿ ಕಾರಿದ್ದು,  ಬಿಜೆಪಿಗರ ಮನಸು ಕಸದ ತೊಟ್ಟಿಯಿದ್ದಂತೆ ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಆದರೆ ಬಿಜೆಪಿ ಮಾತ್ರ ಇದು ಕಾಂಗ್ರೆಸ್ ನ ಸಂಚು ಎಂದು ತಿರುಗೇಟು ನೀಡಿದೆ. ಚುನಾವಣೆಗೂ ಮುನ್ನ ಈ ವಿಚಾರ ಬಿಜೆಪಿ-ಕಾಂಗ್ರೆಸ್ ನಡುವಿನ ಕೆಸರೆರಚಾಟಕ್ಕೆ ವೇದಿಕೆಯಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್