ಡಿಕೆಶಿ ಕಾಲಿಗೆ ನಮಸ್ಕ ರಿಸಿದ ಬಿಜೆಪಿ ಸಂಸದ ಪ್ರತಾಪ್!

Published : May 02, 2019, 08:36 AM IST
ಡಿಕೆಶಿ ಕಾಲಿಗೆ ನಮಸ್ಕ ರಿಸಿದ ಬಿಜೆಪಿ ಸಂಸದ ಪ್ರತಾಪ್!

ಸಾರಾಂಶ

ಎಸ್.ಎಂ.ಕೃಷ್ಣ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಕೆಲ ಸಮಯ ಪ್ರತ್ಯೇಕವಾಗಿ ಮಾತುಕತೆ| ಡಿಕೆಶಿ ಕಾಲಿಗೆ ನಮಸ್ಕ ರಿಸಿದ ಬಿಜೆಪಿ ಸಂಸದ ಪ್ರತಾಪ್!

ಬೆಂಗಳೂರು[ಮೇ.02]: ಲೋಕಸಭಾ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಹಲವು ಬೆಳವಣಿಗೆಗಳ ನಡುವೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಕೆಲ ಸಮಯ ಪ್ರತ್ಯೇಕವಾಗಿ ನಡೆಸಿದ ಮಾತುಕತೆ ಕುತೂಹಲ ಕೆರಳಿಸಿದೆ.

ಈ ನಡುವೆ, ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಸಚಿವ ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಘಟನೆಯೂ ಎಲ್ಲರ ಗಮನ ಸೆಳೆದಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ಜನ್ಮದಿನ ಪ್ರಯುಕ್ತ ಶುಭಾಶಯ ಕೋರಲು ಬುಧವಾರ ಹಲವು ಮುಖಂಡರು ಡಾಲರ್ಸ್ ಕಾಲೋನಿಯಲ್ಲಿನ ಅವರ ನಿವಾಸಕ್ಕೆ ಆಗಮಿಸಿದರು.

ಸಂಸದ ಪ್ರತಾಪ ಸಿಂಹ ಅವರು ಕೃಷ್ಣ ಅವರಿಗೆ ಶುಭಾಶಯ ಕೋರಿ ಹಿಂತಿರುಗುತ್ತಿದ್ದ ವೇಳೆಗೆ ಸಚಿವ ಡಿ. ಕೆ.ಶಿವಕುಮಾರ್ ಆಗಮಿಸಿದರು. ಈ ವೇಳೆ ಶಿವಕುಮಾರ್ ಅವರ ಕಾಲಿಗೆ ನಮಸ್ಕರಿಸಿ ಪ್ರತಾಪ ಸಿಂಹ ಆಶೀರ್ವಾದ ಪಡೆದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!