
ನವದೆಹಲಿ: ಟರ್ಬುಲೆಂಟ್ ಇಯರ್ಸ್-1980-1996ರ ಪುಸ್ತಕದಲ್ಲಿರುವ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳನ್ನು ತೆಗೆದು ಹಾಕಬೇಕೆಂಬ ಅರ್ಜಿ ಸಂಬಂಧ ತಮ್ಮ ಅಭಿಪ್ರಾಯ ತಿಳಿಸುವಂತೆ ದೆಹಲಿ ಹೈಕೋರ್ಟ್, ಭಾರತದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಸೂಚನೆ ನೀಡಿದೆ. ಈ ಕುರಿತಾದ ಮುಂದಿನ ವಿಚಾರಣೆಯನ್ನು ಜು.30ಕ್ಕೆ ಮುಂದೂಡಿದೆ.
ರಾಷ್ಟ್ರಪತಿ ಅವರ ಟರ್ಬುಲೆಂಟ್ ಇಯರ್ಸ್ ಪುಸ್ತಕದಲ್ಲಿನ 1992ರ ಬಾಬ್ರಿ ಮಸೀದಿ ಧ್ವಂಸ ಘಟನೆ ಮತ್ತು ಇತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳನ್ನು ತೆಗೆದು ಹಾಕಲು ತಿರಸ್ಕರಿಸಿದ ಕೆಳ ನ್ಯಾಯಾಲಯವೊಂದರ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಯು.ಸಿ. ಪಾಂಡೆ ಮತ್ತು ಕೆಲ ವಕೀಲರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಧೀಶೆ ಪ್ರತಿಭಾ ಎಂ.ಸಿಂಗ್, ಪ್ರಣಬ್ ಮುಖಜಿಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.