ನಾಳೆಯಿಂದ ಬೆಂಗಳೂರಿನಲ್ಲಿ ಮೂರು ದಿನಗಳ ‘ಪ್ರವಾಸಿ ಭಾರತೀಯ ದಿವಸ್’

Published : Jan 06, 2017, 05:12 PM ISTUpdated : Apr 11, 2018, 12:37 PM IST
ನಾಳೆಯಿಂದ ಬೆಂಗಳೂರಿನಲ್ಲಿ ಮೂರು ದಿನಗಳ ‘ಪ್ರವಾಸಿ ಭಾರತೀಯ ದಿವಸ್’

ಸಾರಾಂಶ

ಭಾರತದ ಜ್ಞಾನ, ತಂತ್ರಜ್ಞಾನ ಪ್ರದರ್ಶನಕ್ಕೆ ವೇದಿಕೆಯಾಗಿದೆ. ನಾಳೆ ಯುವ ಪ್ರವಾಸಿ ದಿವಸ್ ಆರಂಭವಾಗುತ್ತಿದ್ದು, ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಪ್ರವಾಸಿ ಭಾರತೀಯ ದಿವಸ್​ ಉದ್ಘಾಟಿಸಲಿದ್ದಾರೆ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಪ್ರವಾಸಿ ಭಾರತೀಯ ದಿವಸ್ ನಡೆಯಲಿದೆ. ಕರ್ನಾಟಕದಲ್ಲಿ  ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ 14ನೇ ಪ್ರವಾಸಿ ಭಾರತೀಯ ದಿವಸ್​ ನಾಳೆ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆರಂಭವಾಗಲಿದೆ.

ವಿದೇಶದಲ್ಲಿರುವ ಭಾರತೀಯರು ಮಾತೃ ದೇಶಕ್ಕೆ ಸಲ್ಲಿಸುವ ಸೇವೆ ಗೌರವಿಸುವ ಉದ್ದೇಶದಿಂದ ಆರಂಭವಾದ ಪ್ರವಾಸಿ ಭಾರತೀಯ ದಿವಸ್​​ನ ವ್ಯಾಪ್ತಿ ಈ ಬಾರಿ ವಿಸ್ತಾರವಾಗಿದೆ. ಭಾರತದ ಜ್ಞಾನ, ತಂತ್ರಜ್ಞಾನ ಪ್ರದರ್ಶನಕ್ಕೆ ವೇದಿಕೆಯಾಗಿದೆ. ನಾಳೆ ಯುವ ಪ್ರವಾಸಿ ದಿವಸ್ ಆರಂಭವಾಗುತ್ತಿದ್ದು, ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಪ್ರವಾಸಿ ಭಾರತೀಯ ದಿವಸ್​ ಉದ್ಘಾಟಿಸಲಿದ್ದಾರೆ. ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೆಚ್ಚು ಜವಾಬ್ದಾರಿ ವಹಿಸಿ ಆಯೋಜನೆ ಮಾಡುತ್ತಿದೆ.

ಕಾರ್ಯಕ್ರಮದಲ್ಲಿ ಹಲವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಸಂಸ್ಥೆಗಳು ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿವೆ. ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಲವು ಇಲಾಖೆಗಳೂ ಸಹ ವಸ್ತು ಪ್ರದರ್ಶನದಲ್ಲಿ ಭಾಗಿಯಾಗುತ್ತಿವೆ. ಮೂರನೇ ದಿನ ಸಮಾರೋಪ ಸಮಾರಂಭದ ನೇತೃತ್ವವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಹಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ: ಎಲ್ಲಿ?
ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲು ನಿಲ್ದಾಣ ವಿಸ್ತರಣೆ ಕಾರ್ಯ ಆರಂಭ: ಪ್ರಯಾಣಿಕರು ಕಾಯುವ ದುಸ್ಥಿತಿ