
ಗಾಂಧಿನಗರ(ಜ.22): ಹಿಂದೊಮ್ಮೆ ಸಂಗ್ಯಾ ಬಾಳ್ಯಾ ರೀತಿ ಇದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರವೀಣ್ ತೋಗಾಡಿಯಾ, ಇದೀಗ ನಾನೊಂದು ತೀರ ಮತ್ತು ನೀನೊಂದು ತೀರ ಎಂಬಂತಾಗಿದ್ದಾರೆ.
ರಾಜಕೀಯವಾಗಿ ಪರಸ್ಪರ ದೂರವಾಗಿರುವ ಮೋದಿ ಮತ್ತು ತೋಗಾಡಿಯಾ ನಡುವೆ ಇದೀಗ ಮಾತಿನ ಸಮರ ನಡೆಯುತ್ತಿದೆ. ಅದರಲ್ಲೂ ಪ್ರವೀಣ್ ತೋಗಾಡಿಯಾ ಮೋದಿ ವಿರುದ್ಧ ಅವಕಾಶ ಸಿಕ್ಕಾಗಲೆಲ್ಲಾ ಹರಿಹಾಯುತ್ತಿದ್ದಾರೆ.
ಅಂತಾರಾಷ್ಟ್ರೀಯ ಹಿಂದು ಪರಿಷತ್ ಅಧ್ಯಕ್ಷರಾಗಿರುವ ಪ್ರವಿನ್ ತೋಗಾಡಿಯಾ ಮುಂದಿನ ಫೆ.9ರಂದು ಹೊಸ ಪಕ್ಷ ಸ್ಥಾಪಿಸಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ಎಸ್ಎಸ್ ಮೇಲೆ ಕಿಡಿಕಾರಿದ್ದಾರೆ.
'ಪ್ರಧಾನಿ ಮೋದಿ ಮತ್ತು ನಾನು ಸುಮಾರು 43 ವರ್ಷಗಳಿಂದ ಪರಿಚಿತರು. ಅವರೆಂದೂ ಚಹಾ ಮಾರಿದ್ದನ್ನು ನಾನು ನೋಡಿಲ್ಲ..' ಎಂದು ಪ್ರವೀಣ್ ತೋಗಾಡಿಯಾ ಹೇಳಿದ್ದಾರೆ. ಮೋದಿ ತಮ್ಮನ್ನು ಚಾಯ್ ವಾಲಾ ಎಂದು ಹೇಳಿಕೊಳ್ಳೋದು ಕೇವಲ ಮತದಾರರನ್ನು ಸೆಳೆಯುವ ಗಿಮಿಕ್ ಎಂದು ಅವರು ಆರೋಪಿಸಿದ್ದಾರೆ.
ಇದೇ ವೇಳೆ ರಾಮ ಮಂದಿರ ಕುರಿತು ಬಿಜೆಪಿ ಮತ್ತು ಆರ್ಎಸ್ಎಸ್ ನಿಲುವನ್ನು ಟೀಕಿಸಿರುವ ತೋಗಾಡಿಯಾ, ಚುನಾವಣಾ ಲಾಭಕ್ಕಾಗಿ ಮಾತ್ರ ರಾಮ ಮಂದಿರ ವಿವಾದವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಆರ್ಎಸ್ಎಸ್ ಕೂಡ ಬಿಜೆಪಿಗೆ ಚುನಾವಣೆಯಲ್ಲಿ ಅನುವು ಮಾಡಿಕೊಡಲು ರಾಮ ಮಂದಿರ ವಿವಾದವನ್ನು ಜೀವಂತವಾಗಿಟ್ಟಿದೆ ಎಂದು ತೋಗಾಡಿಯಾ ಹರಿಹಾಯ್ದರು.
ಅಲ್ಲದೇ ತಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅಧಿಕಾರಕ್ಕೆ ಬಂದ ಮರುದಿನವೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ತೋಗಾಡಿಯಾ ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.