
ನವದೆಹಲಿ (ಮಾ. 07): ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದು ತೊಗಾಡಿಯಾ ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರವೀಣ್ ತೊಗಾಡಿಯಾ ಕಾರಿಗೆ ಸೂರತ್ ಸಮೀಪ ಟ್ರಕ್’ವೊಂದು ಡಿಕ್ಕಿ ಹೊಡೆದಿದೆ. ನನ್ನನ್ನು ಹತ್ಯೆ ಮಾಡಲು ಪಿತೂರಿ ನಡೆಸಲಾಗಿದೆ. Z-ಪ್ಲಸ್ ಸೆಕ್ಯುರಿಟಿ ಇಲ್ಲದೆಯೂ ಪೊಲೀಸರು ನನಗೆ ಎಸ್ಕಾರ್ಟ್’ಗಳನ್ನು ನೀಡಿಲ್ಲ. ನಾನು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ನನ್ನ ಭದ್ರತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ದೂರು ನೀಡುತ್ತೇನೆ ಎಂದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಏನೂ ಪ್ರಾಣಾಪಾಯವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.