
ನವದೆಹಲಿ: ವಿಶ್ವ ಹಿಂದು ಪರಿಷತ್ನ ಮಾಜಿ ಮುಖಂಡ ಪ್ರವೀಣ್ ತೊಗಾಡಿಯಾ ಅವರು ಅಂತಾರಾಷ್ಟ್ರೀಯ ಹಿಂದು ಪರಿಷತ್ ಎಂಬ ನೂತನ ಹಿಂದು ಸಂಘಟನೆಯೊಂದನ್ನು ಭಾನುವಾರ ಘೋಷಿಸಿದ್ದಾರೆ.
ನೂತನ ಸಂಘಟನೆ ಸ್ಥಾಪನೆ ಬಳಿಕ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೊಗಾಡಿಯಾ, ರಾಮ ಮಂದಿರವನ್ನು ನಿರ್ಮಿಸದೇ ಕೋಟ್ಯಂತರ ಹಿಂದುಗಳಿಗೆ ಕೇಂದ್ರ ಸರ್ಕಾರ ಮೋಸ ಮಾಡಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಿಂದು ಮತದಾರರನ್ನು ಒಂದು ಗೂಡಿಸಲು ನೂತನ ಹಿಂದು ಸಂಘಟನೆ ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ. ತೊಗಾಡಿಯಾ ಏಪ್ರಿಲ್ನಲ್ಲಿ ವಿಎಚ್ಪಿಯನ್ನು ತೊರೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.