
ಗುಜರಾತ್(ಸೆ.26): ದನದ ಶವ ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಗರ್ಭಿಣಿ ಮಹಿಳೆ ಸೇರಿದಂತೆ ದಲಿತ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಗುಜರಾತ್'ನ ಬನ್ಸಾಕಾಂತಾ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ದರ್ಬಾರ್ ಸಮುದಾಯಕ್ಕೆ ಸೇರಿದ್ದ ಸುಮಾರು 10 ಮಂದಿ ಏಕಾಏಕಿ ಮನೆನುಗ್ಗಿ, ಗರ್ಭಿಣಿ ಸಂಗೀತಾ ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ದೂರು ನೀಡಲಾಗಿದೆ. ದನದ ಶವವನ್ನು ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ.
ಇತ್ತೀಚೆಗೆ ಉನಾದಲ್ಲಿ ದನದ ಮಾಂಸ ಸುಲಿಯುತ್ತಿದ್ದರು ಎಂದು ಆರೋಪಿಸಿ ಗೂಂಡಾಗಳ ಗುಂಪೊಂದು ಹಲ್ಲೆ ಮಾಡಿತ್ತು.. ಈಗ, ವಿಲೇವಾರಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿರುವ ಪ್ರಕರಣ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.