ಕಲಬುರಗಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ

Published : Nov 16, 2016, 10:24 AM ISTUpdated : Apr 11, 2018, 12:47 PM IST
ಕಲಬುರಗಿ ವೈದ್ಯರ ನಿರ್ಲಕ್ಷ್ಯಕ್ಕೆ  ಬಾಣಂತಿ ಬಲಿ

ಸಾರಾಂಶ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಮರತೂರ ಗ್ರಾಮದ ನಿವಾಸಿ ಶಿವಲೀಲಾ  ಮೂರು ದಿನಗಳ ಹಿಂದೆ ಹೆಣ್ಣು ಮಗು ಜನ್ಮ ನೀಡಿದ್ದರು. ಆದರೆ ಹೆರಿಗೆ ಬಳಿಕ ತಾಯಿ ಆರೋಗ್ಯದಲ್ಲಿ   ವ್ಯತ್ಯಾಸವಾಗಿ  ಸಾವಿಗೀಡಾಗಿದ್ದಾರೆ.

ಕಲಬುರಗಿ (ನ.15): ಆಸ್ಪತ್ರೆಗಳಲ್ಲಿಯೇ ಹೆರಿಗೆ ಆಗಲಿ ಎಂದು ಸರ್ಕಾರ ಹತ್ತಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಆದರೆ ಸರಕಾರಿ ಆಸ್ಪತ್ರೆಗಳಲ್ಲಿನ ಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ದವಾಗಿದೆ.

ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದ ದುರಂತವೇ ಇದಕ್ಕೆ ಸಾಕ್ಷಿಯಾಗಿದೆ. ವೈದ್ಯರ ನಿರ್ಲಕ್ಷ್ಯವು ಬಾಣಂತಿಯೊಬ್ಬಳನ್ನು ಬಲಿ ತೆಗೆದುಕೊಂಡಿದ್ದು, ಮೃತಳ ಕುಟುಂಬದವರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಮರತೂರ ಗ್ರಾಮದ ನಿವಾಸಿ ಶಿವಲೀಲಾ  ಮೂರು ದಿನಗಳ ಹಿಂದೆ ಹೆಣ್ಣು ಮಗು ಜನ್ಮ ನೀಡಿದ್ದರು. ಆದರೆ ಹೆರಿಗೆ ಬಳಿಕ ತಾಯಿ ಆರೋಗ್ಯದಲ್ಲಿ   ವ್ಯತ್ಯಾಸವಾಗಿ  ಸಾವಿಗೀಡಾಗಿದ್ದಾರೆ.

ಈ ಹಿನ್ನೆಲೆಯಲ್ಲಿ  ವೈದ್ಯರ ನಿರ್ಲಕ್ಷ್ಯ ಸಾವಿಗೆ ಕಾರಣ ಅಂತ ಕುಟುಂಬದವರು ಆರೋಪಿಸಿದ್ದಾರೆ.  ಇನ್ನು ಇದಕ್ಕೆ ಪ್ರತಿಕ್ರಿಯಿಸಿದ  ವೈದ್ಯರು,  ಶಸ್ತ್ರಚಿಕಿತ್ಸೆ ಮಾಡಿ ಬಾಣಂತಿಯನ್ನು ಉಳಿಸಿಕೊಳ್ಳಲು ಶಕ್ತಿ ಮೀರಿ ಶ್ರಮಿಸಿದ್ದೇವೆ,  ಅದರೂ ಪ್ರಯೋಜನವಾಗಲಿಲ್ಲ. ಇದಕ್ಕೆ ವೈದ್ಯರ ನಿರ್ಲಕ್ಷತನ ಕಾರಣವಲ್ಲ  ಎಂದು  ಸರ್ಜನ್ ಜೋಶಿ  ಸಮರ್ಥಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಾವಳಿ ಉಳಿಸಿ: ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ