ರಾಮದಾಸ್ ವಿರುದ್ಧ ಚುನಾವಣಾ ಅಖಾಡಕ್ಕೆ ಇಳಿಯಲು ಪ್ರೇಮಕುಮಾರಿ ಸಜ್ಜು

Published : Apr 10, 2018, 10:07 AM ISTUpdated : Apr 14, 2018, 01:12 PM IST
ರಾಮದಾಸ್ ವಿರುದ್ಧ  ಚುನಾವಣಾ ಅಖಾಡಕ್ಕೆ ಇಳಿಯಲು ಪ್ರೇಮಕುಮಾರಿ ಸಜ್ಜು

ಸಾರಾಂಶ

ಮಾಜಿ ಸಚಿವ ರಾಮದಾಸ್ ವಿರುದ್ದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕಿಳಿದ ಪ್ರೇಮಕುಮಾರಿ ಕೆ.ಆರ್. ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ.

ಮೈಸೂರು : ಮಾಜಿ ಸಚಿವ ರಾಮದಾಸ್ ವಿರುದ್ದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕಿಳಿದ ಪ್ರೇಮಕುಮಾರಿ ಕೆ.ಆರ್. ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ.  ಈ ಸಂಬಂಧ ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.  ಲಿಂಗಾಯಿತ/ವೀರಶೈವ ಧರ್ಮಕ್ಕೆ ಸೇರಿದ ಪ್ರೇಮಕುಮಾರಿ  ಸುತ್ತೂರು ಮಠದ ಶ್ರೀಗಳ  ಆಶೀರ್ವಾದ ಪಡೆದವರಿಗೆ ಜಯ ತಪ್ಪಿದ್ದಲ್ಲ ಎಂದು ರಾಮದಾಸ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

 ಬಿಜೆಪಿಯಿಂದ ರಾಮದಾಸ್ ಗೆ ಟಿಕೆಟ್ ಖಾತ್ರಿಯಾದರೆ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿರುವ ಅವರು, ಕೆ.ಆರ್. ಕ್ಷೇತ್ರದಲ್ಲೇ ಸ್ಪರ್ಧಿಸಿ ನ್ಯಾಯ ಕಂಡುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ .

ಕೆ.ಆರ್. ಕ್ಷೇತ್ರದಲ್ಲಿ 30-35 ಸಾವಿರದಷ್ಟು ಲಿಂಗಾಯತ/ವೀರಶೈವ ಮತಗಳೇ ನಿರ್ಣಾಯಕವಾಗಿದ್ದು,  ಒತ್ತಡಕ್ಕೆ ಕಟ್ಟುಬಿದ್ದು ರಾಮದಾಸ್ ಗೆ ಟಿಕೆಟ್ ನೀಡಿದರೂ ಗೆಲುವು ಸುಲಭವಲ್ಲ.   ಸುತ್ತೂರು ಮಠದ ಭೇಟಿಯಿಂದ ಸ್ಪರ್ಧೆಯ ಉತ್ಸಾಹ ಹೆಚ್ಚಿಸಿಕೊಂಡಿರುವ ಪ್ರೇಮಕುಮಾರಿ ಜಾತಿಯನ್ನು ಟ್ರಂಪ್ ಕಾರ್ಡ್ ಮಾಡಿಕೊಂಡು‌ ರಾಮದಾಸ್ ವಿರುದ್ಧ ಸೆಣಸಲು ಸಜ್ಜಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ