ಕಾವೇರಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣ

Published : Jul 25, 2018, 11:08 AM IST
ಕಾವೇರಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣ

ಸಾರಾಂಶ

ಕಾವೇರಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣ ಮಾಡಲು ಇದೀಗ ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿಕೊಂಡಿದೆ.  ಈ ಬಗ್ಗೆ ಕೇಂದ್ರವೂ ಸಹ ಒಪ್ಪಿಗೆ ನೀಡಬಹುದು ಎನ್ನುವ ಭರವಸೆಯನ್ನ ಹೊಂದಿದೆ. 

ಮಂಡ್ಯ: ಬೆಂಗಳೂರಿಗೆ ಕುಡಿಯುವ ನೀರು ಮತ್ತು ತಮಿಳುನಾಡಿಗೆ ಅಗತ್ಯವಾದಾಗ ನೀರು ಬಿಡಲು ಅನುಕೂಲವಾಗುವಂತೆ ಮೇಕೆದಾಟಿನಲ್ಲಿ ಹೊಸ ಅಣೆಕಟ್ಟೆ ಕಟ್ಟಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದೆ. ಈ ಅಣೆಕಟ್ಟೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲೂ ಘೋಷಣೆ ಮಾಡಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಂಗಳವಾರ ತಿಳಿಸಿದರು. 

ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಶಿವಕುಮಾರ್, ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಯಾವುದೇ ತಕರಾರು ಇಲ್ಲ ಎಂದು ಭಾವಿಸಿದ್ದೇವೆ. ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಲಿದೆ ಎಂಬ ವಿಶ್ವಾಸವಿದೆ. ಈ ಯೋಜನೆ ಪೂರ್ಣಗೊಂಡರೆ ನಮಗೆ ಸುಲಭವಾಗಿ ಕುಡಿಯುವ ನೀರಿನ ಅಗತ್ಯ ಪೂರೈಸಿದಂತಾಗುತ್ತದೆ. ನೀರಿನ ಅಭಾವ ತೋರಿದಾಗ ತಮಿಳುನಾಡಿಗೆ ನೀರು ಬಿಡಲು ಅನುವಾಗುತ್ತದೆ ಎಂದು
ತಿಳಿಸಿದರು.

ಪ್ರತಿಕ್ರಿಯೆಗೆ ನಕಾರ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ರಮ್ಯಾ ಅಥವಾ ಅಂಬರೀಶ್ ಅವರನ್ನು ಕಣಕ್ಕಿಳಿಸುತ್ತೀರಾ ಎಂಬ ಪ್ರಶ್ನೆಗೆ ಸಚಿವರು, ನಾನು ಪ್ರತಿಕ್ರಿಯಿಸುವುದಿಲ್ಲ ಎಂದಷ್ಟೇ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bhatkal: ಮರ ಏರಿ ಹರಕೆ ತೀರಿಸುವ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಶೇಡಬರಿ ಜಾತ್ರೆ
'ನಾಯಿ-ನರಿಗಳು ಕರವೇ ಬಗ್ಗೆ ಮಾತಾಡಿದ್ರೆ ಏನ್‌ ಹೇಳೋಕೆ ಆಗುತ್ತೆ..' ಸುದೀಪ್‌ ಭೇಟಿ ಕುರಿತ ವಿವಾದದ ಬಗ್ಗೆ ನಾರಾಯಣ ಗೌಡ ತಿರುಗೇಟು