ನನ್ನನ್ನು ಜೈಲಿಗೆ ಹಾಕುತ್ತಾರೆ-ಎಲ್ಲಾ ಸಿದ್ಧ ಮಾಡಿಕೊಂಡಿದ್ದಾರೆ : ಡಿಕೆಶಿ

Published : Jul 24, 2019, 09:21 AM IST
ನನ್ನನ್ನು ಜೈಲಿಗೆ ಹಾಕುತ್ತಾರೆ-ಎಲ್ಲಾ ಸಿದ್ಧ ಮಾಡಿಕೊಂಡಿದ್ದಾರೆ : ಡಿಕೆಶಿ

ಸಾರಾಂಶ

ನನ್ನನ್ನು ಜೈಲಿಗೆ ಹಾಕ್ತಾರೆ, ಇದಕ್ಕೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದಾರೆ. ನನ್ನ ಜೈಲಿಗೆ ಹಾಕಿದ್ರೆ ನನ್ನ ನೋಡಲು ಬನ್ನಿ ಎಂದು ಡಿ.ಕೆ.ಶಿವಕುಮಾರ್ ಸ್ಪೀಕರ್ ಬಳಿ ಹೇಳಿದ್ದಾರೆ.

ಬೆಂಗಳೂರು [ಜು.24] :  ರಾಜ್ಯದಲ್ಲಿ ಬಹಿರಂಗವಾಗಿ ಕುದುರೆ ವ್ಯಾಪಾರ ನಡೆಯುತ್ತಿದ್ದರೂ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ. ನನಗೆ ಮಾತ್ರ ಇ.ಡಿ. ಮತ್ತೊಂದು ನೋಟಿಸ್ ನೀಡಿದ್ದು, ಸದ್ಯದಲ್ಲೇ ಜೈಲಿಗೆ ಹಾಕಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. 

ಮಂಗಳವಾರ ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಷ್ಟೆಲ್ಲಾ ಆಗುತ್ತಿದ್ದರೂ ಐಟಿ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ನನಗೆ ಮಾತ್ರ ಇದೀಗ ಮತ್ತೊಂದು ನೋಟಿಸ್ ಜಾರಿ ನಿರ್ದೇಶನಾಲಯ ಜಾರಿ ಮಾಡಿದೆ. ನನ್ನನ್ನು ಜೈಲಿಗೆ ಹಾಕಲಿದ್ದಾರೆ. ನಾನು ಜೈಲಿಗೆ ಹೋದರೆ ನೀವು ನನ್ನನ್ನು ನೋಡಲು ಬರುತ್ತೀರಿ ಎಂಬ ವಿಶ್ವಾಸದೊಂದಿಗೆ ಹೇಳುತ್ತಿದ್ದೇನೆ ಎಂದರು.

ಈ ವೇಳೆ ಸ್ಪೀಕರ್ ರಮೇಶ್ ಕುಮಾರ್, ನೀವು ಲಕ್ಷ ತಪ್ಪು ಮಾಡಿದರೂ ನನ್ನ ಸಹೋದರರು. ಅಂತಹ ಸ್ಥಿತಿ ಬರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಒಂದು ವೇಳೆ ಅಂತಹ ಸ್ಥಿತಿ ಬಂದರೆ ನಿತ್ಯವೂ ನಿಮ್ಮನ್ನು ನೋಡಲು ಬರುತ್ತೇನೆ ಎಂದು ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್