
ನವದೆಹಲಿ(ಆ.09): ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಸರ್ಕಾರದ ಯುಎಪಿಎ ಮಸೂದೆಗೆ ಅಂಕಿತ ಹಾಕಿದ್ದಾರೆ.
ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸಲು, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಕಲ್ಪಿಸುವ ಮಸೂದೆ ಇದೀಗ ಕಾನೂನಾಗಿ ಜಾರಿಗೆ ಬರಲಿದೆ.
ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ, 2019ಕ್ಕೆ ರಾಷ್ಟ್ರಪತಿ ಕೋವೆಂದ್ ಒಪ್ಪಿಗೆ ಸೂಚಿಸಿದ್ದು, ಸಂಶಯಾಸ್ಪದ ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಘೋಷಿಸಿದ ನಂತರ ಅವರ ಮೇಲೆ ಪ್ರಯಾಣ ನಿಷೇಧ ಹೇರಿಕೆ ಸೇರಿದಂತೆ ಹಲವು ಕ್ರಮ ಜೈಗೊಳ್ಳಲು ಈ ಕಾನೂನಿನಡಿ ಅವಕಾಶವಿದೆ.
ಲಷ್ಕರ್-ಎ-ತೋಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝರ್ ಈ ಕಾಯ್ದೆಯಡಿಯಲ್ಲಿ ಭಯೋತ್ಪಾದಕರೆಂದು ಘೋಷಿಸಲ್ಪಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.