
ನವದೆಹಲಿ (ಸೆ.30): ರಾಷ್ಟ್ರಪತಿ ರಾಮನಾಥ್ ಕೋವಿಂದ ಬಿಹಾರ, ತಮಿಳುನಾಡು, ಅಸ್ಸಾಂ, ಮೇಘಾಲಯ ಹಾಗೂ ಅರುಣಾಚಲ ಪ್ರದೇಶಗಳಿಗೆ ರಾಜ್ಯಪಾಲರನ್ನು ನೇಮಿಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್’ಗೂ ಲೆಫ್ಟಿನೆಂಟ್ ಗವರ್ನರ್’ಗಳನ್ನು ನೇಮಕ ಮಾಡಲಾಗಿದೆ.
ಬನ್ವಾರಿಲಾಲ್ ತಮಿಳುನಾಡು ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಇವರು ತಮಿಳುನಾಡಿನ ಜೊತೆಗೆ ಮಹಾರಾಷ್ಟ್ರದ ಹೆಚ್ಚುವರಿ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಿಗೆ ಪೂರ್ಣಾವಧಿ ರಾಜ್ಯಪಾಲರನ್ನು ನೇಮಕ ಮಾಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಬ್ರಿಗೇಡಿಯರ್ ಡಾ. ಬಿ ಡಿ ಮಿಶ್ರಾ ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಸತ್ಯಪಾಲ್ ಮಲಿಕ್ ಬಿಹಾರದ ರಾಜ್ಯಪಾಲರಾಗಿ ನೇಮಕವಾಗಿದ್ದು, ಜಗದೀಶ್ ಮುಖಿ ಅಸ್ಸಾಂ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಮೇಘಾಲಯದ ರಾಜ್ಉಪಾಲರಾಗಿ ಗಂಗಾ ಪ್ರಸಾದ್ ನೇಮಕವಾಗಿದ್ದಾರೆ.
ಅಂಡಮಾನ್ ನಿಕೋಬಾರ್’ಗೆ ದೇವೇಂದ್ರ ಕುಮಾರ್ ಜೋಷಿ ನೇಮಕವಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.