
ನವದೆಹಲಿ(ಜ.07): ಕರ್ನಾಟಕದ ಧಾರವಾಡದಲ್ಲಿ ಆರಂಭವಾಗಿರುವ ಐಐಟಿಗೆ ಪ್ರೊ.ಶೇಶು ಪಸುಮಾರ್ತಿ ಅವರನ್ನು ನೇಮಕ ಮಾಡಲಾಗಿದೆ. ಅವರ ಅಧಿಕಾರದ ಅವಧಿ ಐದು ವರ್ಷಗಳಾಗಿರಲಿವೆ. ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹೊಣೆಯನ್ನು ಅವರು ಹೊಂದಲಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವದ ಆಯ್ಕೆ ಮತ್ತು ಶೋಧನಾ ಸಮಿತಿ ಮಾಡಿದ ಆಯ್ಕೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ. ಶೇಷು ಪಸುಮಾರ್ತಿ ಅವರು ಸದ್ಯ ಐಐಟಿಯ ಬಾಂಬೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪ್ರಾಧ್ಯಾಪಕರಾಗಿದ್ದಾರೆ. ವರಂಗಲ್ನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ 1984ರಲ್ಲಿ ಬಿ.ಟೆಕ್, ಮದ್ರಾಸ್ ಐಐಟಿಯಿಂದ 1986ರಲ್ಲಿ ಎಂ.ಟೆಕ್, 1989ರಲ್ಲಿ ಅದೇ ಸಂಸ್ಥೆಯಿಂದ ಪಿಎಚ್.ಡಿ ಪದವಿ ಪಡೆದುಕೊಂಡಿದ್ದಾರೆ. ಇನ್ನುಳಿದಂತೆ ತಿರುಪತಿ, ಪಾಲಕ್ಕಾಡ್, ಭಿಲೈ-ದುರ್ಗ್, ಗೋವಾದಲ್ಲಿರುವ ಐಐಟಿಗಳಿಗೂ ನಿರ್ದೇಶಕರನ್ನು ನೇಮಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.