
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ.
ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹತ್ವದ ಜಿಎಸ್ ಟಿ ಮಸೂದೆಯನ್ನು ರಾಷ್ಟ್ರಪತಿಗಳ ಸಹಿಗಾಗಿ ಕಳುಹಿಸಲಾಗಿತ್ತು. ಈ ವಿಧೇಯಕಕ್ಕೆ ಈಗಾಗಲೇ 16 ರಾಜ್ಯಗಳು ಒಪ್ಪಿಗೆ ನೀಡಿದ್ದರಿಂದ ಶೇ.50 ರಷ್ಟು ರಾಜ್ಯಗಳ ಒಪ್ಪಿಗೆ ಸಿಕ್ಕಂತಾಗಿತ್ತು.
ಹೀಗಾಗಿ ರಾಷ್ಟ್ರಪತಿಗಳು ಇಂದು ತಮ್ಮ ಅಂಕಿತ ಹಾಕಿದ್ದಾರೆ. ಕೇಂದ್ರ ಸರ್ಕಾರ ಈ ಜಿಎಸ್ ಟಿಯನ್ನು 2017ರ ಏಪ್ರಿಲ್ 1ರಿಂದ ಜಾರಿಗೊಳಿಸಲು ಚಿಂತಿಸುತ್ತಿದ್ದು, ಕಳೆದ ಆಗಸ್ಟ್ 8ರಂದು ಈ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಂಡಿತ್ತು.
ಬಳಿಕ 16 ರಾಜ್ಯಗಳು ಇದಕ್ಕೆ ಅನುಮೋದಿಸಿದ್ದವು. ಇದು ಸಾಂವಿಧಾನಿಕ ತಿದ್ದುಪಡಿಯಾಗಿದ್ದರಿಂದ ಶೇ.50ರಷ್ಟು ರಾಜ್ಯಗಳ ಅನುಮೋದನೆಯ ಅಗತ್ಯ ಇತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.