
ಬೆಂಗಳೂರು (ಮೇ.02): ನಗರದ ‘ನಮ್ಮ ಮೆಟ್ರೊ’ ಮೊದಲ ಹಂತದ ಮೆಟ್ರೋ ರೈಲು ಸೇವೆಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ತಿಂಗಳಾಂತ್ಯ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾಷ್ಟ್ರಪತಿಗಳಿಗೆ ಪತ್ರ ಬರೆದು, ಮೆಟ್ರೋ ಮೊದಲ ಹಂತದ ಸೇವೆ ಉದ್ಘಾಟಿಸುವಂತೆ ಆಹ್ವಾನ ನೀಡಿದ್ದಾರೆ. ಮೂಲಗಳ ಪ್ರಕಾರ, ತಿಂಗಳಾಂತ್ಯಕ್ಕೆ ರಾಷ್ಟ್ರಪತಿಗಳು ಸೇವೆಗೆ ಚಾಲನೆ ನೀಡಲಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಮೆಟ್ರೊ ರೈಲು ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ಸಂಪೂರ್ಣ ಮುಗಿದಿದ್ದು, ರೈಲ್ವೆ ಸುರಕ್ಷತಾ ಆಯುಕ್ತರು ನಾಗಸಂದ್ರ-ಪುಟ್ಟೇನಹಳ್ಳಿ ಮಾರ್ಗದಲ್ಲಿ ಮೇ 12 ರಂದು ಪ್ರಾಯೋಗಿಕ ಸಂಚಾರ ನಡೆಸಲಿದ್ದಾರೆ. ಹೀಗಾಗಿ ಮೇ ತಿಂಗಳಾಂತ್ಯದೊಳಗೆ ಈ ಮಾರ್ಗದಲ್ಲೂ ಮೆಟ್ರೋ ಸಂಚಾರ ಆರಂಭಗೊಳ್ಳುವ ಮೂಲಕ ಮೊದಲನೇ ಹಂತದ ಮೆಟ್ರೋ ಸಂಪೂರ್ಣ ಬಳಕೆಗೆ ಮುಕ್ತವಾಗಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.