ಏಮ್ಸ್‌ನಲ್ಲಿ ಜೇಟ್ಲಿ ಜೀವನ್ಮರಣ ಹೋರಾಟ!

Published : Aug 17, 2019, 07:58 AM IST
ಏಮ್ಸ್‌ನಲ್ಲಿ ಜೇಟ್ಲಿ ಜೀವನ್ಮರಣ  ಹೋರಾಟ!

ಸಾರಾಂಶ

ಅರುಣ್ ಜೇಟ್ಲಿ ಸ್ಥಿತಿ ಚಿಂತಾಜನಕ| ಏಮ್ಸ್‌ನಲ್ಲಿ ಜೇಟ್ಲಿ ಜೀವನ್ಮರಣ ಹೋರಾಟ: ರಾಷ್ಟ್ರಪತಿ ಭೇಟಿ

ನವದೆಹಲಿ[ಆ.17]: ಕಳೆದೊಂದು ವಾರದಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕೇಂದ್ರ ಹಣಕಾಸು ಖಾತೆ ಮಾಜಿ ಸಚಿವ ಅರುಣ್‌ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಕೇಂದ್ರ ಆರೋಗ್ಯ ಖಾತೆ ಸಚಿವ ಹರ್ಷವರ್ಧನ್‌, ಅಶ್ವಿನಿ ಚೌಭೆ ಇದ್ದರು. ಉಸಿರಾಟ ತೊಂದರೆಯಿಂದಾಗಿ ಆ.9 ರಂದು ಅರುಣ್‌ ಜೇಟ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನುರಿತ ವೈದ್ಯರ ತಂಡದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಆದರೆ, ಜೇಟ್ಲಿ ಅವರ ಆರೋಗ್ಯ ಸ್ಥಿತಿ ಕುರಿತು ಇದುವರೆಗೂ ಆಸ್ಪತ್ರೆ ಯಾವುದೇ ಮಾಹಿತಿ ನೀಡಿಲ್ಲ.

ಕಳೆದ ಶನಿವಾರ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಆರೋಗ್ಯ ವಿಚಾರಿಸಿ, ಜೇಟ್ಲಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾವುದೇ ಆತಂಕವಿಲ್ಲ ಎಂದು ತಿಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?
ಕೇಂದ್ರದಿಂದ ಹೆಚ್ಚೇ ರಸಗೊಬ್ಬರ ಪೂರೈಕೆ; Karnataka ಸರ್ಕಾರವೇ ಸರಿಯಾಗಿ ವಿತರಿಸಿಲ್ಲ: ಪ್ರಲ್ಹಾದ್ ಜೋಶಿ ಕಿಡಿ