
ನವದೆಹಲಿ(ಆ.01): ತ್ರಿವಳಿ ತಲಾಖ್ ನಿಷೇಧಿಸುವ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ 2019ಕ್ಕೆ ರಾಷ್ಟ್ರಪತಿ ಆಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
ರಾಷ್ಟ್ರಪತಿ ಅಂಕಿತ ದೊರೆತ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡಿರುವ ತ್ರಿವಳಿ ತಲಾಖ್ ಮಸೂದೆ ಶೀಘ್ರದಲ್ಲೇ ಕಾನೂನಾಗಿ ಜಾರಿಯಾಗಲಿದೆ.
ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ ತ್ರಿವಳಿ ತಲಾಖ್ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲ್ಪಡಲಿದ್ದು ತ್ರಿವಳಿ ತಲಾಖ್ ಮೂಲಕ ವಿಚ್ಚೇದನ ನೀಡುವ ಪತಿಗೆ ಮೂರು ವರ್ಷ ಜೈಲು ಶಿಕ್ಷೆಯಾಗಲಿದೆ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.