
ನವದೆಹಲಿ, [ಜ.12]: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ. 10 ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
ಸಂವಿಧಾನ ತಿದ್ದುಪಡಿ ಮಸೂದೆಗೆ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿತ್ತು. ನಂತರ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕಾಗಿ ರಾಷ್ಟ್ರಪತಿ ಭವನಕ್ಕೆ ಕಳುಹಿಸಲಾಗಿತ್ತು. ಅದರಂತೆ [ಇಂದು] ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಸೂದೆಗೆ ಅಂಕಿತ ಹಾಕಿದ್ದಾರೆ.
ಮೇಲ್ವರ್ಗ ಮೀಸಲಾತಿ ಪಡೆಯಲು 3 ಮಾನದಂಡಗಳು, ಯಾರಿಗೆ ಲಾಭ? ಇಲ್ಲಿದೆ ಮಾಹಿತಿ
ಚಳಿಗಾಲದ ಸಂಸತ್ ಅಧಿವೇಶನದ ವೇಳೆ ಪ್ರಧಾನಿ ಮೋದಿ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಯುವಕರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.10 ಮೀಸಲಾತಿಯ ಮಸೂದೆ ಕುರಿತ ನಿರ್ಣಯವನ್ನು ಕೈಗೊಂಡಿದ್ದರು.
ಈ ಮೀಸಲಾತಿಗೆ ಕೆಲ ವಿರೋಧ ಪಕ್ಷಗಳ ನಾಯಕರು ಬೆಂಬಲ ಸೂಚಿಸಿದ್ದು, ಬಳಿಕ ರಾಜ್ಯಸಭೆಯಲ್ಲೂ ಈ ಮಸೂದೆ ಪಾಸ್ ಆಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ