ಕೊಡಗಿನ ವೀರರಿಗೆ ರಾಷ್ಟ್ರಪತಿ ಕನ್ನಡದಲ್ಲಿ ಟ್ವೀಟ್!

By Web DeskFirst Published Aug 20, 2018, 5:38 PM IST
Highlights

ಶತಮಾನದ ಮಹಾಮಳೆಗೆ ತತ್ತರಿಸಿದ ಕೊಡಗು! ಕನ್ನಡದಲ್ಲಿ ಟ್ವೀಟ್ ಮಾಡಿದ ರಾಷ್ಟ್ರಪತಿ ಕೋವಿಂದ್! ಕೊಡಗು ಜನರೊಂದಿಗೆ ದೇಶ ಇರುವುದಾಗಿ ಟ್ವೀಟ್! ಕೊಡಗು ಜನರ ಧೈರ್ಯ ಮೆಚ್ಚಿಕೊಂಡ ರಾಷ್ಟ್ರಪತಿ!
ಪರಿಹಾರ ಕಾರ್ಯಾಚರಣೆ ತೃಪ್ತಿ ತಂದಿದೆ ಎಂದ ಕೋವಿಂದ್

ನವದೆಹಲಿ(ಆ.20): ಶತಮಾನದ ಮಹಾಮಳೆಗೆ ತತ್ತರಿಸಿರುವ ಕೊಡಗಿನ ಜನರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಧೈರ್ಯ ತುಂಬಿದ್ದು, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕೊಡಗಿನ ಜನರ ಜೊತೆ ತಾವಿರುವುದಾಗಿ ತಿಳಿಸಿದ್ದಾರೆ.

ರಾಷ್ಟ್ರಪತಿ ಕೋವಿಂದ್‍ರವರು ಕರ್ನಾಟಕದ ರಾಜ್ಯಪಾಲರು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ರಾಜ್ಯದ ಕೊಡಗು ಮತ್ತಿತರ ಪ್ರದೇಶಗಳಲ್ಲಿ ಪ್ರವಾಹದಿಂದ ಉಂಟಾದ ಪರಿಸ್ಥಿತಿಯ ಬಗ್ಗೆ ವಿಚಾರಿಸಿದರು. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಜನತೆಯ ಚೈತನ್ಯ ಶಕ್ತಿಯನ್ನು ಪ್ರಶಂಸಿಸಿದರು

— President of India (@rashtrapatibhvn)

ಕನ್ನಡದಲ್ಲಿ ಟ್ವೀಟ್ ಮಾಡಿರುವ ಕೋವಿಂದ್, ಈಗಾಗಲೇ ತಾವು ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರ ಜೊತೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಜಲಪ್ರಳಯಕ್ಕೆ ಎದೆಯೊಡ್ಡಿರುವ ಕೊಡಗು ಜನರ ಧೈರ್ಯವನ್ನು ರಾಷ್ಟ್ರಪತಿ ಕೊಂಡಾಡಿದ್ದಾರೆ.

ಹಾಗೂ ಪರಿಸ್ಥಿತಿಯನ್ನು ಎದುರಿಸುವಲ್ಲಿ ಇಡೀ ರಾಷ್ಟ್ರದ ಜನತೆ ತಮ್ಮೊಂದಿಗೆ ಇದೆ ಎಂಬ ಭರವಸೆಯನ್ನು ನೀಡಿದರು.

— President of India (@rashtrapatibhvn)

Latest Videos

ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಇಡೀ ದೇಶ ಕೊಡಗು ಜನರೊಂದಿಗೆ ಇದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಡೆಸುತ್ತಿರುವ ಪರಿಹಾರ ಕಾರ್ಯಾಚರಣೆ ಕುರಿತು ಭರವಸೆ ವ್ಯಕ್ತಪಡಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದಾಗಿ ನಡೆಸುತ್ತಿರುವ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ವಿಪತ್ತು ನಿರ್ವಹಣಾ ಸಂಸ್ಥೆಗಳು, ಸಾರ್ವಜನಿಕರು, ರಾಜ್ಯ ಹಾಗೂ ಕೇಂದ್ರದ ಸಿಬ್ಬಂದಿಗಳ ಚುರುಕಿನ ಕಾರ್ಯತತ್ಪರತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

— President of India (@rashtrapatibhvn)

ವಿಪತ್ತು ನಿರ್ವಹಣಾ ಸಿಬ್ಬಂದಿ, ಸಾರ್ವಜನಿಕರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಚುರುಕಿನ ಕಾರ್ಯಾಚರಣೆಗೆ ರಾಷ್ಟ್ರಪತಿ ಕೋವಿಂದ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

click me!