6 ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಆಡಳಿತ : ಭವಿಷ್ಯ

Published : Sep 15, 2019, 09:10 AM IST
6 ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಆಡಳಿತ : ಭವಿಷ್ಯ

ಸಾರಾಂಶ

ರಾಜ್ಯದಲ್ಲಿ ಇನ್ನಾರು ತಿಂಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹಿರಿಯರೋರ್ವರು ಭವಿಷ್ಯ ನುಡಿದಿದ್ದಾರೆ. 

ಬೆಂಗಳೂರು [ಸೆ.15]: ರಾಜ್ಯದಲ್ಲಿ ಮುಂದಿನ ಆರು ತಿಂಗಳಲ್ಲಿ ರಾಜ್ಯಪಾಲರ ಆಡಳಿತ ಎದುರಾಗಲಿದ್ದು, ನಂತರ ಚುನಾವಣೆ ನಡೆಯಲಿದೆ ಎಂದು ಸ್ವಾತಂತ್ರ್ಯ ಹೋರಾಟ ಡಾ.ಎಚ್‌.ಎಸ್‌ ದೊರೆಸ್ವಾಮಿ ಅವರು ಭವಿಷ್ಯ ನುಡಿದಿದ್ದಾರೆ.

ಟಿಪು ಸುಲ್ತಾನ್‌ ಸಂಯುಕ್ತ ರಂಗ (ಟಿಯುಎಫ್‌ಎಫ್‌)  ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ದಿ. ಎ.ಕೆ. ಸುಬ್ಬಯ್ಯ ಅವರಿಗೆ ‘ಶ್ರದ್ಧಾಂಜಲಿ ಸಲ್ಲಿಕೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳನ್ನು ನಾಶಮಾಡುವ ಮೂಲಕ ಬಿಜೆಪಿ ಅತಿಕ್ರಮಣ ಧೋರಣೆ ತಾಳಿದೆ. ಇದರಿಂದ ರಾಜ್ಯದಲ್ಲಿ ಪ್ರತಿಸ್ಪರ್ಧಿ ನಾಯಕರೇ ಇಲ್ಲದಂತಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಹೀಗಾಗಿ ಬಿಜೆಪಿಯ ನಿಲುವಿಗೆ ಮಣಿಯದೇ ಅವರ ವಿರುದ್ಧ ಎಲ್ಲರೂ ಸಂಘಟಿತರಾಗಿ ಚುನಾವಣೆಗೂ ಮುನ್ನವೇ ಹೋರಾಡಬೇಕಿದೆ. ಪ್ರಜಾಪ್ರಭುತ್ವಕ್ಕೆ ಪೂರಕ ಫಲಿತಾಂಶ ಪಡೆಯಬೇಕಿದೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಟಿಯುಎಫ್‌ಎಫ್‌ ಉಪಾಧ್ಯಕ್ಷ ಪ್ರೊ. ಎನ್‌.ವಿ ನರಸಿಂಹಯ್ಯ, ಕೆಎಸ್‌ಎಸ್‌ಡಿ ಅಧ್ಯಕ್ಷ ಚನ್ನಕೃಷ್ಣಪ್ಪ ,ಜೆಡಿಎಸ್‌ ಮುಖಂಡ ಸೈಯದ್‌ ಶಫಿವುಲ್ಲಾ, ದಲತಿ ಮತ್ತು ಮೈನಾರಿಟಿ ಸೇನೆ ಅಧ್ಯಕ್ಷ ಎ.ಜೆ.ಖಾನ್‌, ಜನತಾರಂಗದ ಸಿ.ಕೆ ರವಿಚಂದ್ರ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ