
ನವದೆಹಲಿ (ಮಾ.13): ಪ್ರಧಾನಿ ನರೇಂದ್ರ ಮೋದಿಯವರ ಸಲಹೆ ಮೇರೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮನೋಹರ್ ಪರ್ರಿಕರ್ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ.
ಪ್ರಧಾನಿ ಸಲಹೆ ಮೇರೆಗೆ ಪ್ರಣಬ್ ಮುಖರ್ಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಹೆಚ್ಚುವರಿಯಾಗಿ ರಕ್ಷಣಾ ಖಾತೆಯ ಜವಾಬ್ದಾರಿಯನ್ನು ವಹಿಸಲು ಸೂಚಿಸಿದ್ದಾರೆ.
ಮನೋಹರ್ ಪರ್ರಿಕರ್ ನಾಳೆ ಗೋವಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 21 ಶಾಸಕರು ಬೆಂಬಲ ವ್ಯಕ್ತಪಡಿಸಿದ ನಂತರ ಗೋವಾ ರಾಜ್ಯಪಾಲೆ ಮೃದುಲಾ ಸಿಂಹ ಸರ್ಕಾರ ರಚಿಸುವ ಬಗ್ಗೆ ಮಾತುಕತೆ ನಡೆಸಲು ಪರ್ರಿಕರ್ ರನ್ನು ಆಹ್ವಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.