
ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಕಾಫಿ, ಟೀ ಸೇರಿದಂತೆ ಪಾನೀಯಗಳು ಮತ್ತು ತಿಂಡಿ, ಊಟಕ್ಕೆ ಭಾರೀ ದುಬಾರಿ ದರ ವಿಧಿಸಲಾಗುತ್ತದೆ ಎಂಬುದು ಹಿಂದಿನಿಂದಲೂ ಪ್ರಯಾಣಿಕರ ದೂರು. ಈ ದೂರಿಗೀಗ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕೂಡಾ ಧ್ವನಿಗೂಡಿಸಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿ ನೀಡಿರುವ ಚಿದು, ‘ಚೆನ್ನೈ ವಿಮಾನ ನಿಲ್ದಾಣದಲ್ಲಿ ನಾನೊಂದು ಕಪ್ ಟೀ ಕೇಳಿದೆ. ಟೀ ಬ್ಯಾಗ್ ಮತ್ತು ಬಿಸಿ ನೀರನ್ನಿಟ್ಟು 135 ರು. ಕೇಳಿದರು.
ನಾನದನ್ನು ನಿರಾಕರಿಸಿದೆ. ನಾನು ಮಾಡಿದ್ದು ತಪ್ಪೋ, ಸರಿಯೋ?’ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಂದು ಟ್ವೀಟ್ನಲ್ಲಿ,‘ ಕಾಫಿ ಬೆಲೆ 180 ರು. ಅಂತೆ. ಆಗ ಯಾರಿದನ್ನು ಕೊಳ್ಳುತ್ತಾರೆ ಎಂದು ಕೇಳಿದೆ. ‘ಹಲವರು’ ಎಂದರು. ಅಂದರೆ ನಾನು ಹಿಂದುಳಿದವನೇ?’ ಎಂದು ಚಿದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.