
ಕೊಯಮತ್ತೂರು[ಸೆ.21]: ತಮ್ಮ ಸುರಕ್ಷತೆಯನ್ನು ಲೆಕ್ಕಿಸದ ದೇವಸ್ಥಾನದ ಅರ್ಚಕರೊಬ್ಬರು ಹಾವು ಕಚ್ಚುತ್ತಿದ್ದರೂ ಅದನ್ನು ಹಿಡಿದು ಮಕ್ಕಳನ್ನು ಪಾರುಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಮೋಹನ್ ಆ ಧೈರ್ಯಶಾಲಿ. 20 ಮಕ್ಕಳಿದ್ದ ಅಂಗನವಾಡಿಯೊಂದರಲ್ಲಿ ಹಾವು ಕಾಣಿಸಿಕೊಂಡು ಭೀತಿ ಹುಟ್ಟಿಸಿತ್ತು. ಚಾವಣಿ ಮೇಲೆ ಹಾವು ಕಂಡ ಮಕ್ಕಳು ಕಿರುಚಾಡಿದ್ದಾರೆ. ಈ ವೇಳೆ ಪಕ್ಕದಲ್ಲೇ ಇದ್ದ ದೇವಸ್ಥಾನದ ಅರ್ಚಕ ಮೋಹನ್ ಓಡಿಬಂದು ಹಾವನ್ನು ಹಿಡಿದಿದ್ದಾರೆ.
ಈ ವೇಳೆ ಹಾವು ಅವರಿಗೆ ಕಚ್ಚಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾನೆ. ಈ ವೇಳೆ ವಿಷಕಾರಿ ಹಾವಲ್ಲ ಎಂದು ತಿಳಿದುಬಂದಿದೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಹಾವನ್ನು ರಕ್ಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.