ನಂಜನಗೂಡು ದೇಗುಲ ಬಂದ್?

Published : Dec 16, 2018, 11:17 AM ISTUpdated : Dec 16, 2018, 11:19 AM IST
ನಂಜನಗೂಡು ದೇಗುಲ ಬಂದ್?

ಸಾರಾಂಶ

ವೇತನ ಶ್ರೇಣಿ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ನೌಕರರು ಡಿ.17ರಂದು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಳ್ಳದೆ ಪ್ರತಿಭಟಿಸಲು ನಿರ್ಧರಿಸಿದ್ದಾರೆ.

ನಂಜನಗೂಡು :  ವೇತನ ಶ್ರೇಣಿ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ನೌಕರರು ಡಿ.17ರಂದು ದೇವಾಲಯದ ಮುಂಭಾಗ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಳ್ಳದೆ ಪ್ರತಿಭಟಿಸಲು ನಿರ್ಧರಿಸಿದ್ದಾರೆ.

ನೌಕರರ ಸಂಘದ ಅಧ್ಯಕ್ಷ ಶ್ರೀಕಂಠ ಮಾತನಾಡಿ, ಶ್ರೀಕಂಠೇಶ್ವರಸ್ವಾಮಿ ದೇವಾಲಯವು ಪ್ರವರ್ಗ ಎ ವರ್ಗದ ದೇವಾಲಯವಾಗಿದ್ದು ಸಾಕಷ್ಟುಆದಾಯ ಬರುತ್ತಿದೆ. ನೌಕರರಿಗೆ ಆದಾಯದ ಶೇ.35ಕ್ಕೆ ಮೀರದಂತೆ ವೇತನ ನೀಡಲಾಗುತ್ತಿದೆ. ಇದರಿಂದ ನೌಕರರ ಜೀವನ ಮಟ್ಟಕಷ್ಟಕರವಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವೇತನ ಶ್ರೇಣಿ ನೌಕರರಿಗೆ 6ನೇ ವೇತನ ಶ್ರೇಣಿಯನ್ನು ಅಳವಡಿಸಬೇಕು, ಕಾರ್ಯಾರ್ಥ ನೌಕರರನ್ನು ಕಾಯಂಗೊಳಿಸಿ ವೇತನ ಮಂಜೂರು ಮಾಡಿಕೊಡುವುದು, ಪ್ರತಿವರ್ಷ 1 ತಿಂಗಳ ಬೋನಸ್‌ ನೀಡಬೇಕು. 

ಸೇವಾವಧಿಗೂ ಮುನ್ನ ಅಕಾಲಿಕ ಮರಣ ಹೊಂದಿದ್ದಲ್ಲಿ ಅನುಕಂಪದ ಆಧಾರದ ಮೇಲೆ ಅವರ ಕುಟುಂಬಸ್ಥರಿಗೆ ಹುದ್ದೆ ನೀಡಬೇಕು. ನೌಕರರು ನಿವೃತ್ತಿಗೊಂಡಾಗ ಅವರಿಗೆ .5 ಲಕ್ಷ ಪರಿಹಾರ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ದೇವಾಲಯದ ಮುಂಭಾಗ ಡಿ.17ರಂದು ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್