
ನವದೆಹಲಿ(ಜೂ.25): ಆಕಾಶವಾಣಿ ರೇಡಿಯೋದ ಮಹತ್ವದ ಕಾರ್ಯಕ್ರಮ 33 ನೇ ಮನ್ ಕಿ ಬಾತ್ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಮುಸ್ಲಿಂ ಭಾಂದವರಿಗೆ ರಂಜಾನ್ ಶುಭಾಶಯ ಕೋರಿದ್ದಾರೆ.
ಈ ಸಂದರ್ಭದಲ್ಲಿ ಯೋಗದ ಬಗ್ಗೆ ಪ್ರಸ್ತಾಪಿಸಿದ ಮೋದಿ, ಜೂನ್ 21 ರಂದು ಇಡೀ ವಿಶ್ವವೇ ಯೋಗಮಯವಾಗಿತ್ತು. ಚೀನಾ ಹಾಗೂ ಪೆರುವಿನಲ್ಲೂ ಜನ ಯೋಗ ಮಾಡಿದ್ದಾರೆ. ವಿಶ್ವದೆಲ್ಲೆಡೆ ಯೋಗ ದಿನವನ್ನ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ನಾನೂ ಸಹ ಮಳೆಯಲ್ಲಿಯೇ ಕುಳಿತು ಯೋಗ ಮಾಡಿದೆ ಎಂದು ಮೋದಿ ಸ್ಮರಿಸಿದರು.
ಇನ್ನು ಶೌಚಾಲಯದ ಅಗತ್ಯತೆ ಬಗ್ಗೆ ಮೋದಿ ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ. ಇದೇ ವೇಳೆ ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಒಂದು ಕರಾಳ ಘಟನೆ. ಈ ವೇಳೆ ವಾಜಪೇಯಿ ಸೇರಿದಂತೆ ಅನೇಕ ಗಣ್ಯರು ಜೈಲು ಸೇರಿದ್ದರು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.