ಗುರು ಪೂರ್ಣಿಮೆ: ಪೇಜಾವರ ಶ್ರೀ ಭೇಟಿಯಾದ ಮೋದಿ

Published : Jul 16, 2019, 08:50 PM ISTUpdated : Jul 16, 2019, 09:32 PM IST
ಗುರು ಪೂರ್ಣಿಮೆ: ಪೇಜಾವರ ಶ್ರೀ ಭೇಟಿಯಾದ ಮೋದಿ

ಸಾರಾಂಶ

ಗುರು ಪೂರ್ಣಿಮೆ ಹಿನ್ನೆಲೆ| ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಭೇಟಿ ಮಾಡಿದ ಪ್ರಧಾನಿ| ‘ಶ್ರೀಗಳೊಂದಿಗೆ ಸಮಯ ಕಳೆಯುವ ಸುವರ್ಣಾವಕಾಶ ಲಭಿಸಿದೆ’| ‘ಶ್ರೀಗಳ ಮಾತು ಕೇಳುವುದು ಒಂದು ಅದ್ಭುತ ಅನುಭವ’| ಗುರುಗಳಿಂದ ಕಲಿಯವುದು ಬಹಳಷ್ಟಿದೆ ಎಂದ ಪ್ರಧಾನಿ|

ನವದೆಹಲಿ(ಜು.16): ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.

ನವದೆಹಲಿಯಲ್ಲಿ ಶ್ರೀಗಳನ್ನು ಭೇಟಿಯಾದ ಪ್ರಧಾನಿ ಮೋದಿ, ಈ ಕುರಿತು ಟ್ವಿಟ್ಟರ್’ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

‘ಗುರುಪೂರ್ಣಿಮೆಯ ಶುಭ ಸಮಯದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ಜೊತೆಗೆ ಸಮಯ ಕಳೆಯುವ ಸುವರ್ಣಾವಕಾಶ ಲಭಿಸಿದೆ..’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಶ್ರೀಗಳ ಆಲೋಚನೆ, ಅವರ ಮಾತುಗಳನ್ನು ಕೇಳುವುದು ಒಂದು ಅದ್ಭುತ ಅನುಭವ ಎಂದಿರುವ ಪ್ರಧಾನಿ, ಗುರುಗಳಿಂದ ಕಲಿಯವುದು ಬಹಳಷ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೈಲುಗಳು ರೆಸಾರ್ಟ್‌ಗಳಾಗಿದ್ದು, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕೈಮೀರಿದೆ: ಆರ್.ಅಶೋಕ್ ಆತಂಕ
ಕಾಂಗ್ರೆಸ್‌ ಯೋಜನೆ ಹೆಸರು ಬದಲಿಸಿದ್ದೇ ಬಿಜೆಪಿ ಸಾಧನೆ: ಸಚಿವ ಸಂತೋಷ್‌ ಲಾಡ್‌ ವ್ಯಂಗ್ಯ