ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ: ಪ್ರಮುಖ ಆರೋಪಿ ಬಂಧನ

Published : Nov 03, 2016, 01:20 AM ISTUpdated : Apr 11, 2018, 12:36 PM IST
ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ: ಪ್ರಮುಖ ಆರೋಪಿ ಬಂಧನ

ಸಾರಾಂಶ

ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್​ ವಶಕ್ಕೆ ನೀಡಲಾಗಿದೆ. ಈಗಾಗಲೇ ವಜೀರ್, ಮುಜೀಬ್​​, ವಾಸಿಮ್​, ಇರ್ಫಾನ್​ ಪಾಷಾ ಎಂಬ ನಾಲ್ವರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಬೆಂಗಳೂರು (ನ.03): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯ ಪ್ರಮುಖ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಬೆಂಗಳೂರು ನಗರ ಜಿಲ್ಲಾಧ್ಯಕ್ಷನಾಗಿರುವ ಆಸೀಮ್ ಷರೀಫ್ ಹತ್ಯೆಯ ಮಾಸ್ಟರ್ ಮೈಂಡ್ ಆಗಿದ್ದೆನ್ನಲಾಗಿದ್ದು, ನಿನ್ನೆ ರಾತ್ರಿಯೇ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್​ ವಶಕ್ಕೆ ನೀಡಲಾಗಿದೆ. ಈಗಾಗಲೇ ವಜೀರ್, ಮುಜೀಬ್​​, ವಾಸಿಮ್​, ಇರ್ಫಾನ್​ ಪಾಷಾ ಎಂಬ ನಾಲ್ವರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದಾರೆ.

ರುದ್ರೇಶ್​ ಹತ್ಯೆ ಬಳಿಕ ಆಸೀಮ್​ ಷರೀಫ್​​ ಕೇರಳಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ. ಪ್ರಕರಣದ ಜಾಡು ಹಿಡಿದ ಪೊಲಿಸರು ಕೊನೆಗೂ ಎಡೆಮುರಿ ಕಟ್ಟಿದ್ದಾರೆ. ಅಕ್ಟೋಬರ್ 16ರಂದು ಹಾಡುಹಗಲೇ ರುದ್ರೇಶ್ ದುಷ್ಕರ್ಮಿಗಳಿಂದ ಕೊಲೆಯಾಗಿದ್ದರು​

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ