
ನವದೆಹಲಿ(ಜೂ.2): ಜನಸಾಮಾನ್ಯರಿಗೂ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೇವೆ ದೊರೆಯಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ್ದ ‘ಆಯುಷ್ಮಾನ್ ಭಾರತ’ ಯೋಜನೆಗೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ವಿರೋಧ ವ್ಯಕ್ತಪಡಿಸುತ್ತಿವೆ.
‘ಆಯುಷ್ಮಾನ್ ಭಾರತ’ ಯೋಜನೆ ಅಡಿಯಲ್ಲಿ ಅತ್ಯಂತ ಕ್ಲಿಷ್ಟಕರ ಆರೋಗ್ಯ ಸೇವೆಗೂ ಕಡಿಮೆ ದರ ನಿಗದಿ ಮಾಡಲಾಗಿದೆ. ಹೀಗಾಗಿ ಇದನ್ನು ನಿಭಾಯಿಸಲು ಕಷ್ಟವಾಗುತ್ತಿದೆ ಎಂಬುದು ಕೆಲ ಖಾಸಗಿ ಆಸ್ಪತ್ರೆಗಳ ವಾದ. ದೇಶದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಾದ ಫೋರ್ಟಿಸ್, ಅಪೊಲೋ, ಮೆದಾಂತಾ ಮತ್ತು ನಾರಾಯಣ ಆಸ್ಪತ್ರೆಗಳು ಈ ಕುರಿತು ಧ್ವನಿ ಎತ್ತಿವೆ.
ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಸಮಿತಿಯು ನೀತಿ ಆಯೋಗ ಮತ್ತು ಕೇಂದ್ರ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದು, ಕ್ಲಿಷ್ಟಕರ ಆರೋಗ್ಯ ಸೇವೆಗೆ ಹೆಚ್ಚಿನ ದರ ನಿಗದಿ ಮಾಡಲು ಖಾಸಗಿ ಆಸ್ಪತ್ರೆಗಳಿಗೆ ಅಧಿಕಾರ ನೀಡಬೇಕು ಎಂದು ಮನವಿ ಮಾಡಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆ, ‘ಆಯುಷ್ಮಾನ್ ಭಾರತ’ ಆರೋಗ್ಯ ಸೇವೆ ಯೋಜನೆ ಅಡಿಯಲ್ಲಿ ದೇಶಾದ್ಯಂತ ಒಂದೇ ದರ ನಿಗದಿ ಮಾಡಲಾಗಿದ್ದು, ದರ ವ್ಯತ್ಯಾಸದ ಹೊಣೆಯನ್ನು ಆಯಾ ರಾಜ್ಯ ಸರ್ಕಾರಗಳಿಗೇ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.